Breaking News

ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ; ‘ಲಂಚ ಕೇಸ್’ ಅರ್ಜಿ ವಿಚಾರಣೆಗೆ ಮಧ್ಯಂತರ ತಡೆ

Spread the love

ಹೊಸದಿಲ್ಲಿ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚದ ದೂರಿನ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸ್ ತನಿಖೆಗೆ ತಡೆ ನೀಡುವಂತೆ ಅವರು ಸಲ್ಲಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ‘ತನಿಖೆಗೆ ಮಧ್ಯಂತರ ತಡೆ’ ನೀಡಿದೆ.

ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅಧಿಕಾರಿಗಳು, ಗುತ್ತಿಗೆದಾರರನ್ನು ಆರೋಪಿಗಳನ್ನಾಗಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶ ನೀಡಿತ್ತು.

ಬಹುಮಹಡಿ ವಸತಿ ಯೋಜನೆಯ ಗುತ್ತಿಗೆ ಮುಂದುವರಿಸಲು 29 ಕೋಟಿ ರೂ. ಲಂಚವನ್ನು ಯಡಿಯೂರಪ್ಪ ಹಾಗೂ ಕುಟುಂಬ ವರ್ಗ ಪಡೆದಿದೆ. ವಿಜಯೇಂದ್ರ ಹಾಗೂ ಶಶಿಧರ ಮರಡಿ ಒಡೆತನಕ್ಕೆ ಸೇರಿದ ಬೆಲ್ ಗ್ರಾವಿಯಾ ಹಾಗೂ ಎಸ್ವಿಎಸ್ ಸಂಸ್ಥೆಗಳಿಗೆ ಬಂಗಾಲದ ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅಬ್ರಾಹಂ ತಮ್ಮ ದೂರಿನಲ್ಲಿ ಆರೋಪಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ