Breaking News

ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Spread the love

ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಈ ಹಿಂದಿನ ಆದೇಶದಂತೆ ಸೆ. 27ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅವಧಿ ಮುಂದುವರೆಯಲಿದೆ.

ಈ ಹಿಂದೆ ಸೆ.14ರಂದು ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯ ಹಿನ್ನೆಲೆಯಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ನ್ಯಾಯಾಲಯವು​​ ನ್ಯಾಯಾಂಗ ಬಂಧನದ ಅವಧಿಯನ್ನು​ ಸೆ. 27ರವರೆಗೆ ವಿಸ್ತರಿಸಿತ್ತು.

ನ್ಯಾಯಾಂಗ ಬಂಧನ ವಿಸ್ತರಣೆ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯನ್ನು ತಿರಸ್ಕರಿಸಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ