Breaking News

ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ

Spread the love

ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ.

 

 

ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಿಂದ ಮಹತ್ವದ ಆದೇಶ ಮಾಡಲಾಗಿದೆ.

 

ಅಕ್ಟೋಬರ್ 2ರಿಂದ 20ರವರೆಗೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ ಹಮ್ಮಿಕೊಂಡಿರುವ ರಾಜ್ಯ ಸರ್ಕಾರ ತನ್ನ ಮೇಲಿನ ಆರೋಪಮುಕ್ತವಾಗಲು ಹೊರಟಿದೆ. ಈ ಅಭಿಯಾನ ವರ್ಷವಿಡಿ ನಡೆಯಲಿ ಎಂಬ ಬಗ್ಗೆ ಜನ ಆಗ್ರಹ ವ್ಯಕ್ತವಾಗುತ್ತಿದೆ.

ಎಲ್ಲಾ ಕಡೆ ಲಂಚದ ಅವತಾರ

ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಲಂಚದ ಅವತಾರ ಹೆಚ್ಚಾಗಿದೆ. ಯಾವುದೇ ಒಂದು ಕೆಲಸ ಆಗಲು ಲಂಚ ಕೊಡಲೇಬೇಕು ಎಂಬ ಸ್ಥಿತಿ ಇದೆ. ಗುತ್ತಿಗೆ, ಸರ್ಕಾರಿ ಪ್ರಾಜೆಕ್ಟ್ ಅಲ್ಲೂ ಕಮಿಷನ್ ದಂಧೆ ಹೆಚ್ಚಾಗಿರುವ ಹಿನ್ನೆಲೆ ಸರ್ಕಾರ ಆದೇಶ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ