Breaking News

ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ನನಗೆ ಹೇಳಿದ್ದರು: ಲಾಯರ್ ವಿಕಾಸ್ ಸಿಂಗ್

Spread the love

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ನನಗೆ ಹೇಳಿದ್ದರು ಎಂದು ನಟನ ಪರವಾಗಿ ವಾದಿಸುತ್ತಿರುವ ಲಾಯರ್ ವಿಕಾಸ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಸುಶಾಂತ್ ಸಿಂಗ್ ಪ್ರಕರಣದಲ್ಲಿ ಆತ್ಮಹತ್ಯೆಯಲ್ಲ ಅದು ಕೊಲೆ ಎಂದು ಕಂಡು ಹಿಡಿಯುವಲ್ಲಿ ಸಿಬಿಐ ತಡ ಮಾಡಿದೆ. ಇದರಿಂದ ನನಗೆ ನಿರಾಶೆಯಾಗಿದೆ. ಈ ಹಿಂದೆ ನನ್ನ ಜೊತೆ ಮಾತನಾಡಿದ್ದ ಏಮ್ಸ್ ವೈದ್ಯರ ತಂಡದ ಡಾಕ್ಟರ್ ಒಬ್ಬರು, ನಾನು ಕಳುಹಿಸಿದ್ದ ಸುಶಾಂತ್ ಸಿಂಗ್ ಅವರ ಡೆತ್ ಫೋಟೋಸ್ ನೋಡಿ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಹೇಳಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ಜೊತೆಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಂಗ್, ಸುಶಾಂತ್ ಸಿಂಗ್ ಪ್ರಕರಣ ಸಿಬಿಐ ತನಿಖೆಯಲ್ಲಿ ಹಳ್ಳ ಹಿಡಿಯುತ್ತಿದೆ. ಜೊತೆಗೆ ಸುಶಾಂತ್ ಅವರ ಪ್ರಕರಣ ಬಾಲಿವುಡ್ ಡ್ರಗ್ ಮಾಫಿಯಾದ ಕಡೆಗೆ ತಿರುವು ಪಡೆದುಕೊಳ್ಳುತ್ತಿದೆ. ಈ ಮೂಲಕ ದಿನಕ್ಕೆ ಓರ್ವ ನಟಿಯ ಫ್ಯಾಶನ್ ಶೋ ನಡೆಯುತ್ತಿದೆ ಎಂದು ಕಿಡಿಕಾರಿದರು. ಇಂದು ನಾವು ಅಸಹಾಯಕ ಸ್ಥಿತಿಗೆ ತಲುಪ್ಪಿದ್ದೇವೆ. ಸುಶಾಂತ್ ಪ್ರಕರಣ ಯಾವ ದಿಕ್ಕಿನಲ್ಲಿ ಹೋಗುತ್ತಿದೆ ಎಂದು ಗೊತ್ತಾಗುತ್ತಿಲ್ಲ ಎಂದರು.

ಸಾಮಾನ್ಯವಾಗಿ ಇಷ್ಟೋತ್ತಿಗಾಗಲೇ ಈ ಪ್ರಕರಣದ ಕುರಿತು ಸಿಬಿಐ ಸುದ್ದಿಗೋಷ್ಠಿ ಮಾಡಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಈ ದಿನದವರೆಗೂ ಸಿಬಿಐ ಯಾವುದೇ ಸುದ್ದಿಗೋಷ್ಠಿ ಮಾಡಿಲ್ಲ. ಜೊತೆಗೆ ಈ ಪ್ರಕರಣ ಯಾವ ಮಟ್ಟಕ್ಕೆ ಬಂದಿದೆ ಮತ್ತು ಏನನ್ನು ಕಂಡು ಹಿಡಿದಿದ್ದಾರೆ ಎಂದು ಸಿಬಿಐ ಏನನ್ನು ಹೇಳಿಲ್ಲ. ಇದು ಈ ಪ್ರಕರಣದಲ್ಲಿ ಗಭೀರವಾದ ಸಮಸ್ಯೆಯಾಗಿದೆ ಎಂದು ವಿಕಾಸ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.

34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೂನ್ 14 ರಂದು ಮುಂಬೈ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅಂದು ತನಿಖೆ ಮಾಡಿದ್ದ ಮುಂಬೈ ಪೊಲೀಸರು ಆತ್ಮಹತ್ಯೆ ಎಂದು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದಾದ ನಂತರ ಅವರನ್ನು ಕೊಲೆ ಮಾಡಲಾಗಿದೆ ಎಂದು ಕೆಲವರು ಗಂಭೀರ ಆರೋಪ ಮಾಡಿದ್ದರು.


Spread the love

About Laxminews 24x7

Check Also

Tatkalನಲ್ಲಿ ಬುಕ್ಕಿಂಗ್ ಮಾಡಿದ ಕೂಡಲೇ ಕನ್ಫರ್ಮ್​ ಆಗುತ್ತೆ ಸೀಟ್, ಕೆಲವರಿಗಷ್ಟೇ ಗೊತ್ತು ಈ ಟಿಪ್ಸ್​!

Spread the love ನವದೆಹಲಿ(ಸೆ.18): ರೈಲ್ವೆಯನ್ನು ಭಾರತದ ಜೀವನಾಡಿ ಎಂದು ಕರೆಯಲಾಗುತ್ತದೆ. ಪ್ರತಿದಿನ ಕೋಟಿಗಟ್ಟಲೆ ಜನರನ್ನು ತಮ್ಮ ನಿಗದಿತ ಪ್ರದೇಶಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ