Breaking News
Home / Uncategorized / ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ

Spread the love

ಧಾರವಾಡ: ರಾಷ್ಟ್ರಪತಿಗೆ ಸ್ವಾಗತ ಕೋರುವ ತರಾತುರಿಯಲ್ಲಿ ನಗರದ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬ್ಯಾನರ್‌ನಲ್ಲಿ ಬರೆಸಿರುವುದು ಟೀಕೆಗೆ ಕಾರಣವಾಗಿದೆ.

ಸೆ.26ರಂದು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆದರೆ, ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, ಸ್ವಾಗತ ಕೋರಿರುವ ಬ್ಯಾನರ್‌ನಲ್ಲಿ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಎಂದು ಮುದ್ರಿಸಲಾಗಿದೆ. ಧಾರವಾಡದ ಹಲವು ಭಾಗಗಳಲ್ಲಿ ಇಂತಹ ಬ್ಯಾನರ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ.


Spread the love

About Laxminews 24x7

Check Also

ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯ

Spread the love ಬೆಳಗಾವಿ: ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ