Home / ರಾಜಕೀಯ / ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

Spread the love

ಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಕಲಬುರ್ಗಿ ನಗರದ ವಿವಿಧಡೆ ಹಚ್ಚಲಾಗಿದೆ.

 

ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ, ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ. ವೀರಶೈವ ಲಿಂಗಾಯತರ ಭಾವನೆಗಳಿಗೆ ಅವಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗರೇ ಲಿಂಗಾಯತ ಸಮುದಾಯದ ಸಿಎಂ ತಂಟೆಗೆ ಬರಬೇಡಿ, ಬಂದರೆ ಮುಂದೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಹಚ್ಚಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ಘೋಷಣೆ ಕೂಗಿದ್ದಾರೆ.


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ