Breaking News

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

Spread the love

ಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಕಲಬುರ್ಗಿ ನಗರದ ವಿವಿಧಡೆ ಹಚ್ಚಲಾಗಿದೆ.

 

ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ, ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ. ವೀರಶೈವ ಲಿಂಗಾಯತರ ಭಾವನೆಗಳಿಗೆ ಅವಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗರೇ ಲಿಂಗಾಯತ ಸಮುದಾಯದ ಸಿಎಂ ತಂಟೆಗೆ ಬರಬೇಡಿ, ಬಂದರೆ ಮುಂದೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಹಚ್ಚಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ಘೋಷಣೆ ಕೂಗಿದ್ದಾರೆ.


Spread the love

About Laxminews 24x7

Check Also

ಜನವರಿ 22ರಿಂದ ಜನವರಿ 31ರವರೆಗೆ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿಎಂ

Spread the loveಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ