Breaking News

ಕೇವಲ 10 ಸೆಕೆಂಡ್ ನಲ್ಲಿ ನಿಮ್ಮನ್ನು ಮುಗಿಸ್ತೀವಿ; RSS ಪ್ರಮುಖರಿಗೆ SDPI ಮುಖಂಡನ ಧಮ್ಕಿ

Spread the love

ತಿರುವನಂತಪುರಂ: ಪಿಎಫ್‌ಐ ಹಾಗೂ ಎಸ್ ಡಿ ಪಿ ಐ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿ ಹಲವರನ್ನು ಬಂಧಿಸಿರುವ ಬೆನ್ನಲ್ಲೇ ಕೇರಳದಲ್ಲಿ ಎಸ್ ಡಿ ಪಿ ಐ ಹಾಗೂ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಅಲ್ಲದೇ ಆರ್ ಎಸ್ ಎಸ್ ಮುಖಂಡರಿಗೆ ಬೆದರಿಕೆ ಹಾಕಿದ್ದಾರೆ.

ಎನ್ ಐಎ ದಾಳಿ ಖಂಡಿಸಿ ಎರ್ನಾಕುಲಂನಲ್ಲಿ ಪ್ರತಿಭಟನೆ ನಡೆಸಿರುವ ಎಸ್ ಡಿ ಪಿ ಐ ಸಂಘಟನೆ, ಕೇಂದ್ರ ಸರ್ಕಾರ ಹಾಗೂ ಆರ್ ಎಸ್ ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ವೇಳೆ ಎಸ್ ಡಿ ಪಿ ಐ ಮುಖಂಡ ಶಿಜೂ ಬಕ್ಕರ್ ಆರ್ ಎಸ್ ಎಸ್ ಪ್ರಮುಖರಿಗೆ ಧಮ್ಕಿ ಹಾಕಿದ್ದು, ಕೇವಲ 10 ಸೆಕೆಂಡ್ ಗಳಲ್ಲಿ ಆರ್ ಎಸ್ ಎಸ್ ಪ್ರಮುಖರನ್ನು ಮುಗಿಸುತ್ತೇವೆ. ಆರ್ ಎಸ್ ಎಸ್ ನಾಯಕರು ಬೀದಿನಾಯಿಗಳು ಎಂದು ಬಾಯಿಗೆ ಬಂದಂತೆ ಮಾತನಾಡಿದ್ದಾರೆ.

ನಾವು ಗೆಲ್ಲುತ್ತೀವೋ ಸೋಲುತ್ತೀವೋ, ಏನೇ ಆದರೂ ಜೀವ ಕೊಡಲು ಸಿದ್ಧ. 100 ಅಲ್ಲ 500 ಮಂದಿಯನ್ನಾದರೂ ಬಂಧಿಸಿ. ಯಾವ ಕಾರಣಕ್ಕೂ ನಿಮ್ಮ ಮುಂದೆ ಜಗ್ಗಲ್ಲ. ಆರ್ ಎಸ್ ಎಸ್ ಪ್ರಮುಖರನ್ನು ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ