Breaking News

ಇಂದಿನಿಂದ ತಿರುಪತಿಯಲ್ಲಿ ಬ್ರಹ್ಮೋತ್ಸವ ಶುರು

Spread the love

ತಿರುಪತಿ:ದೇಶಾದ್ಯಂತ ಸಂಭ್ರಮದ ನವರಾತ್ರಿ ಹಬ್ಬ ಕಳೆಕಟ್ಟುತ್ತಿರುವಂತೆಯೇ ಜಗತ್ತಿನ ಶ್ರೀಮಂತ ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಮಂಗಳವಾರದಿಂದ 9 ದಿನಗಳ ಕಾಲ ಬ್ರಹ್ಮೋತ್ಸವ ನಡೆಯಲಿದೆ. ಸಂಪ್ರದಾಯ ಪ್ರಕಾರ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಅವರು ಹೊಸ ವಸ್ತ್ರಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

 

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಬ್ರಹ್ಮೋತ್ಸವ ಅದ್ಧೂರಿಯಾಗಿ ಆಚರಿಸಲು ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಅದ್ಧೂರಿಯಾಗಿ ಬ್ರಹ್ಮೋತ್ಸವ ಆಚರಿಸಲಾಗುತ್ತದೆ.

ಹೀಗಾಗಿ, ದೇಶದ ವಿವಿಧ ಭಾಗಗಳಿಂದ ಭಕ್ತಾದಿಗಳು ತಿರುಪತಿಗೆ ಆಗಮಿಸುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ತಿರುಪತಿ ತಿರುಮಲ ದೇವಸ್ಥಾನಮ್ಸ್‌(ಟಿಟಿಡಿ) ಆಡಳಿತ ಮಂಡಳಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬಹ್ಮೋತ್ಸವ ಕಾರ್ಯಕ್ರಮ ಅ.5ರಂದು ಮುಕ್ತಾಯಗೊಳ್ಳಲಿದೆ.

ಭದ್ರತಾ ವ್ಯವಸ್ಥೆಗಾಗಿ ದೇಗುಲ ಆಡಳಿತ ಮಂಡಳಿ ಮತ್ತು ಜಿಲ್ಲಾಡಳಿತ ಏಳು ಸಾವಿರ ಮಂದಿಯನ್ನು ನಿಯೋಜಿಸಿದೆ. ಗರುಡ ಸೇವಾ ದಿನ ತಿರುಮಲದಲ್ಲಿ ಹೆಚ್ಚುವರಿಯಾಗಿ 2 ಸಾವಿರ ಮಂದಿ ಭದ್ರತಾ ಸಿಬ್ಬಂದಿ ಇರಲಿದ್ದಾರೆ.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ