Breaking News

ಗುಂಪು ಘರ್ಷಣೆ; ಬಾಲಕನಿಗೆ ಚೂರಿ ಇರಿತ

Spread the love

ಬೆಳಗಾವಿ: ಇಲ್ಲಿನ ಅನಂತಶಯನ ಗಲ್ಲಿಯಲ್ಲಿ ಸೋಮವಾರ ರಾತ್ರಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚೂರಿ ಇರಿತದಿಂದ ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕ್ಯಾಂಪ್‌ ಪ್ರದೇಶದ ನಿವಾಸಿ ಫರಾನ್‌ ಧಾರವಾಡಕರ (15) ಚೂರಿ ಇರಿತಕ್ಕೆ ಒಳಗಾದವ.

ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಾನೆ. ‌ಗಾಯಗೊಂಡ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫರಾನ್‌ ಹಾಗೂ ಇಬ್ಬರು ಸ್ನೇಹಿತರು ಬೈಕ್‌ ಮೇಲೆ ಹೊರಟಿದ್ದರು. ನಗರದ ಅಂಬಾ ಭವಾನಿ ಮಂದಿರದ ಹತ್ತಿರ 10 ಯುವಕರ ಗುಂಪೊಂದು ಇವರ ಮೇಲೆ ಆಕ್ರಮಣ ಮಾಡಿತು. ಫರಾನ್‌ಗೆ ಚೂರಿಯಿಂದ ಇರಿಯಲಾಯಿತು. ಇದನ್ನು ಕಂಡು ಇಬ್ಬರು ಸ್ನೇಹಿತರು ತಪ್ಪಿಸಿಕೊಂಡು ಓಡಿದರು. ಘಟನೆಗೆ ಕಾರಣ ಹಾಗೂ ಆರೋಪಿಗಳ ಮಾಹಿತಿ ಇನ್ನೂ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ