Breaking News

ಬಿಜೆಪಿ ಶಾಸಕರು ನಾಳೆ ಸಂಜೆಯೊಳಗೆ ಕಾಂಗ್ರೆಸ್‌ಗೆ ಸೇರುತ್ತಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Spread the love

ಳ್ಳಾರಿ, ಸೆ.27 : ಮುಹೂರ್ತ ಫಿಕ್ಸ್ ಮಾಡಿಕೊಳ್ಳಿ, ಇಂದು ಅಥವಾ ನಾಳೆ ಸಂಜೆಯೊಳಗೆ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮುನಿಸಿಪಲ್ ಮೈದಾನವನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಕಾಂಗ್ರೆಸ್‌ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲಿದ್ದಾರೆ ಎಂಬ ಶಾಸಕ ಸೋಮಶೇಖರ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಮುಹೂರ್ತ ಫಿಕ್ಸ್ ಆಗಿದೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದ್ದಾರೆ.

ಸೆ.30ರಿಂದ ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಎಂಟ್ರಿಯಾಗಲಿದೆ. ಯಾತ್ರೆಯಲ್ಲಿ ನಾವು ಬಳ್ಳಾರಿಯಲ್ಲಿ ಮಾತ್ರ ಸಮಾವೇಶ ಹಮ್ಮಿಕೊಂಡಿದ್ದೇವೆ. ಎರಡು ದಿನ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹೀಗಾಗಿ ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಎಲ್ಲ ನಾಯಕರು ಪಕ್ಷಾತೀತವಾಗಿ ಬಂದು ಸಮಾವೇಶದಲ್ಲಿ ಭಾಗಿಯಾಗಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

“ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಸಬೇಕೆಂಬ ಆಲೋಚನೆ ಇತ್ತು, ಆದರೆ ಕ್ರೀಡಾಂಗಣದ ಕಾಮಗಾರಿ ಕೆಲಸ ಇರುವುದರಿಂದ ಮುನಿಸಿಪಲ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಮುನಿಸಿಪಲ್ ಮೈದಾನ ಐತಿಹಾಸಿಕ ಮೈದಾನವಾಗಿದ್ದು ಈ ಹಿಂದೆ ಇಲ್ಲಿ ಇಂದಿರಾ ಗಾಂಧಿ ಅವರು, ಸೋನಿಯಾ ಗಾಂಧಿ ಅವರು ಸಮಾವೇಶ ನಡೆಸಿದ್ದಾರೆ. ಹೀಗಾಗಿ ಈ ಮೈದಾನ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುನಿಸಿಪಲ್ ಮೈದಾನದಲ್ಲಿ ಕಡಿಮೆ ಜನ ಸೇರಲು ಅವಕಾಶ ಇದ್ದರೂ ಕೂಡ ಯಾತ್ರೆಯಲ್ಲಿ ಒಟ್ಟಾರೆಯಾಗಿ ಅಂದಾಜು ಐದು ಲಕ್ಷ ಜನ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

Spread the loveಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ