Breaking News

ಬಂಡೀಪುರ ಮೂಲಕ ರಾಜ್ಯಕ್ಕೆ ರಾಹುಲ್ ಗಾಂಧಿಎಂಟ್ರಿ

Spread the love

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಂಡೀಪುರ ಅರಣ್ಯ ಪ್ರದೇಶದ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ.

ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್​​ ನಾಯಕರು ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಳಿ ತೆರಳಿ ಸ್ವಾಗತಿಸಿದ್ದಾರೆ‌‌. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ‌. ಪಾಟೀಲ್, ಆರ್.ವಿ. ದೇಶಪಾಂಡೆ, ವೀರಪ್ಪ ಮೊಯಿಲಿ, ಕೆ‌.ಜೆ. ಜಾರ್ಜ್ ಸೇರಿದಂತೆ ಹತ್ತು ಹಲವು ನಾಯಕರುಗಳು ಭಾಗಿಯಾಗಿದ್ದಾರೆ. ಗುಂಡ್ಲುಪೇಟೆಯ ಹಂಗಳ ಗ್ರಾಮದ ಬಳಿ ದಾರಿ ಮಧ್ಯ ಕಾಫಿ ಕುಡಿಯಲು ಖಾಸಗಿ ರೆಸಾರ್ಟ್​ಗೆ ತೆರಳಿದರು.

ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಎದುರು ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದಾದ ಬಳಿಕ, ಪಾದಯಾತ್ರೆ ನಡೆಸಲಿದ್ದು ಸೋಲಿಗರು, ಆಕ್ಸಿಜನ್ ದುರಂತದ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ‌.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ