Breaking News

ಮಹದಾಯಿ ಯೋಜನೆ’ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ದಸರಾ ಬಳಿಕ ಕಾಮಗಾರಿ

Spread the love

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹತ್ವಾಕಾಂಕ್ಷಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ದಸರಾ ಹಬ್ಬದ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.

 

 

ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಜಲಶಕ್ತಿ ಇಲಾಖೆ ಅನುಮೋದನೆ ನೀಡಿದೆ. ದಸರಾ ಹಬ್ಬದ ಕಾರಣ ಸರ್ಕಾರಿ ರಜೆಗಳಿರುವ ಕಾರಣ ಕೇಂದ್ರ ಜಲಶಕ್ತಿ ಇಲಾಖೆಯು ನೀಡಿರುವ ಅನುಮೋದನೆ ಆದೇಶವು ರಾಜ್ಯ ಸರ್ಕಾರದ ಕೈಗೆ ಮುಂದಿನ ವಾರ ಸಿಗಲಿದೆ.

 

ಮಹದಾಯಿ ಯೋಜನೆ ಅನುಷ್ಠಾನಕ್ಕೆ 20 ವರ್ಷಗಳ ಬಳಿಕ ಮುಹೂರ್ತ ಒದಗಿ ಬಂದಿದ್ದು, ಕೇಂದ್ರದ ಆದೇಶ ರಾಜ್ಯ ಸರ್ಕಾರಕ್ಕೆ ತಲುಪುತ್ತಿದ್ದಂತೆ ಯೋಜನೆ ಕಾಮಗಾರಿ ಆರಂಭಿಸುವ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ವಿಸ್ತೃತ ಯೋಜನಾ ವರದಿಗೆ ಈಗಾಗಲೆ ಅಂತಾರಾಜ್ಯ ನದಿ ನೀರು ವಿವಾದ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗ ಅನುಮತಿ ನೀಡಿವೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ