Breaking News

ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

Spread the love

ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.

 

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.

ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. ‘ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ’ ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ