ಗದಗ: ‘ತೋಂಟದ ಸಿದ್ಧಲಿಂಗ ಸ್ವಾಮೀಜಿ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರಸಕ್ತ ಸಾಲಿನಲ್ಲಿ ಬೀದರ್ನ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಅವರಿಗೆ ಪ್ರದಾನ ಮಾಡಲಾಗುವುದು’ ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್.ಪಟ್ಟಣಶೆಟ್ಟಿ ತಿಳಿಸಿದ್ದಾರೆ.
ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಅ.6ರಂದು ಇಲ್ಲಿ ನಡೆಯುವ ಲಿಂ.ಡಾ.ತೋಂಟದ ಸಿದ್ಧಲಿಂಗಸ್ವಾಮೀಜಿಯವರ ನಾಲ್ಕನೇ ಪುಣ್ಯಸ್ಮರಣೆ, ‘ಮರಣವೇ ಮಹಾನವಮಿ’ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ.ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.