Breaking News
Home / ಜಿಲ್ಲೆ / ಬೆಂಗಳೂರು / ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

Spread the love

ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಎಚ್ಚರಿಕೆ ನೀಡಿದ್ದಾರೆ.

ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.

 

ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರಿಂದ ಬಾಂಡ್ ಬರೆಸಿಕೊಳ್ಳುತ್ತೇವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಅವರೇ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.

47 ಕೆಎಸ್‌ಆರ್‌ಪಿ, 26 ಸಿಎಆರ್ ತುಕಡಿ ಸೇರಿದಂತೆ ನಗರದ ಎಲ್ಲಾ ಪೊಲೀಸರನ್ನು ನಾಳಿನ ಬಂದೋಬಸ್ತ್ ಗೆ ನಿಯೋಜನೆ ಮಾಡುತ್ತೇವೆ. ನಗರದ ಬೇರೆ ಬೇರೆ ಕಡೆಗಳಿಂದ ಹೊರಡುವ ಪ್ರತಿಭಟನಾ ಮೆರವಣಿಗೆಗೆ ಅವಕಾಶ ಇಲ್ಲ. ಟ್ರಾಫಿಕ್ ಜಾಮ್ ಆಗುವ ಹಿನ್ನೆಲೆ ಮೆರವಣಿಗೆಗೆ ಅವಕಾಶ ನೀಡಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ