Breaking News
Home / ಜಿಲ್ಲೆ / ಹಬ್ಬಳ್ಳಿ / ಹುಬ್ಬಳ್ಳಿಯಲ್ಲಿ ರಸ್ತೆ ಸಮಸ್ಯೆ ಕಂಡು ಧರೆಗಿಳಿದ ದೇವತೆ..!

ಹುಬ್ಬಳ್ಳಿಯಲ್ಲಿ ರಸ್ತೆ ಸಮಸ್ಯೆ ಕಂಡು ಧರೆಗಿಳಿದ ದೇವತೆ..!

Spread the love

ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ರಸ್ತೆಗಳ ಪರಿಸ್ಥಿತಿ ನೋಡಿದರೆ ಭಯ ಮೂಡುವಂತಿದೆ. ಇಲ್ಲಿನ ರಸ್ತೆಗಳ ದುಸ್ಥಿತಿ ಬಗ್ಗೆ ಬಾಲಕಿಯೊಬ್ಬಳು ವಿನೂತನ ರೀತಿಯಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾಳೆ.

ಹುಬ್ಬಳ್ಳಿಯ ಹರ್ಷಿತಾ ಮೆಹರವಾಡೆ ಎಂಬ ಬಾಲಕಿ ರಾಜಧಾನಿ ಕಾಲೋನಿಯಲ್ಲಿರುವ ರಸ್ತೆ ಅವ್ಯವಸ್ಥೆ ಕುರಿತು ದೇವತೆ ವೇಷದಲ್ಲಿ ಸಾಕ್ಷ್ಯಚಿತ್ರದ ಮೂಲಕ ಜನಪ್ರತಿನಿಧಿಗಳ ಗಮನ ಸೆಳೆದಿದ್ದಾಳೆ. ದಸರಾ ಸಂದರ್ಭದಲ್ಲಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನಾತ್ಮಕ ಪ್ರದರ್ಶನ ಮಾಡಲಾಗಿದೆ.

ದುರ್ಗಾ ದೇವಿ ವೇಶ ಧರಿಸಿರುವ ಬಾಲಕಿ ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ. ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ. ಭಕ್ತರೇ ನಗರವನ್ನು ಅಂದಗೊಳೊಸಿ ಎಂದು ಸಂದೇಶ ಸಾರಿದ್ದಾಳೆ. ಪುಟ್ಟ ಪೋರಿಯ ಈ ವಿಡಂಬನಾತ್ಮಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರ್ಷಿತಾ ಮೆಹರವಾಡೆ ಕುಟುಂಬಸ್ಥರು ಈ ವಿಡಿಯೋ ಮಾಡಿದ್ದಾರೆ.


Spread the love

About Laxminews 24x7

Check Also

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

Spread the loveಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ