Home / ಜಿಲ್ಲೆ / ಬೆಂಗಳೂರು / ಸಿಇಟಿ ಕೋಟಾ ಸೀಟು ಆಕಾಂಕ್ಷಿಗಳಿಗೆ ನಿರಾಸೆ

ಸಿಇಟಿ ಕೋಟಾ ಸೀಟು ಆಕಾಂಕ್ಷಿಗಳಿಗೆ ನಿರಾಸೆ

Spread the love

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈಗಾಗಲೇ ವಿಳಂಬ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈಗ ಸೀಟು ಹಂಚಿಕೆ ಯಲ್ಲಿಯೂ ವಿಳಂಬ ನೀತಿ ಅನುಸರಿಸುವ ಮೂಲಕ ಬಡ ವಿದ್ಯಾರ್ಥಿಗಳ ಸರಕಾರಿ ಕೋಟ ಸೀಟು ದೊರೆಯದಂತೆಯೂ ನಿರಾಸೆ ಮೂಡಿಸಿದೆ.

 

ಸುಮಾರು 10 ದಿನಗಳ ಮೊದಲೇ ಕಾಮೆಡ್‌-ಕೆ ಸೀಟುಗಳ ಹಂಚಿಕೆ ವೇಳಾಪಟ್ಟಿಯನ್ನು ಕಾಮೆಡ್‌-ಕೆ ಪ್ರಕಟಿಸಿದ್ದು ಇದಕ್ಕೂ ಮೊದಲೇ ಸಿಇಟಿ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸಬಹುದಿತ್ತು. ಆದರೂ ಕಾಮೆಡ್‌-ಕೆ ಬಳಿಕ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸುತ್ತಿದೆ.

ಅ. 7ರಂದು ಕಾಮೆಡ್‌-ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟವಾಗಲಿದ್ದು, ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅ.13 ಕೊನೆಯ ದಿನವಾಗಿದೆ. ಆದರೆ, ಸಿಇಟಿ ಸೀಟು ಹಂಚಿಕೆ ಫ‌ಲಿತಾಂಶವು ಅ.17ರಂದು ಪ್ರಕಟವಾಗಲಿದೆ. ಇದರಿಂದ ವಿದ್ಯಾರ್ಥಿಗಳು ಮೊದಲ ಸುತ್ತಿನಲ್ಲಿ ಸಿಇಟಿ ಸೀಟುಗಳನ್ನು ಪಡೆಯಲು ಸಮಸ್ಯೆಯಾಗಲಿದೆ. ಒಂದು ವೇಳೆ ಸೀಟನ್ನು ನಿರಾಕರಿಸಿದರೆ, ಮತ್ತೆ ತಾವು ಇಚ್ಛಿಸಿದ ಕಾಲೇಜುಗಳಲ್ಲಿ ಸೀಟು ಸಿಗದಿದ್ದರೆ ಹೇಗೆ ಎಂಬ ಆತಂಕ ಕೂಡ ವಿದ್ಯಾರ್ಥಿಗಳಲ್ಲಿ ನೆಲೆಸಿದೆ.

ಕಾಮೆಡ್‌-ಕೆಗಿಂತ ಮೊದಲೇ ಸಿಇಟಿ ಕೌನ್ಸೆಲಿಂಗ್‌ ಪ್ರಕ್ರಿಯೆ ಪೂರ್ಣಗೊಳಿಸಿದ್ದರೆ, ಸಿಇಟಿ ಮೊದಲ ಸುತ್ತಿನಲ್ಲಿ ಸೀಟು ದೊರೆಯದಿದ್ದ ವಿದ್ಯಾರ್ಥಿಗಳು ಕಾಮೆಡ್‌-ಕೆಯಲ್ಲಿ ಸೀಟು ಪಡೆಯುತ್ತಿದ್ದರು. ಸರಕಾರಿ ಕೋಟ ಸೀಟು ಪಡೆಯುತ್ತಿದ್ದರಿಂದ ವಿದ್ಯಾರ್ಥಿಗಳಿಗೆ ಶುಲ್ಕ ಕೂಡ ಕಡಿಮೆಯಾಗುತ್ತಿತ್ತು. ಸರಕಾರಿ ಕೋಟಾದಲ್ಲಿ ಖಾಸಗಿ ಕಾಲೇಜುಗಳಲ್ಲಿ 91,878 ರೂ.ಗಳು ಶುಲ್ಕವಿದೆ. ಅದೇ ಕಾಮೆಡ್‌-ಕೆ ನಲ್ಲಿ 1,58,123 ರೂ. ಶುಲ್ಕವಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಸಿಗದಿದ್ದರೆ, ಕನಿಷ್ಠ ಖಾಸಗಿ ಕಾಲೇಜುಗಳಲ್ಲಿ ಸರಕಾರಿ ಕೋಟಾದಡಿ ಓದಬಹುದು ಎಂಬ ಆಸೆಯನ್ನಿಟ್ಟುಕೊಂಡವರಿಗೆ ಸರಕಾರ ತಣ್ಣೀರೆರಚಿದೆ ಎಂದು ಸಿಇಟಿ ಸೀಟು ಆಕಾಂಕ್ಷಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ