Breaking News

ಕಾರ್ತಿಕ ಮಾಸದಲ್ಲಿ ಅಲ್ಲೋಲ-ಕಲ್ಲೋಲ: ಕೋಡಿಮಠದ ಶ್ರೀ ಭವಿಷ್ಯ

Spread the love

ಧಾರವಾಡ: ಕಾರ್ತಿಕ ಮಾಸದಲ್ಲಿ ಪ್ರಕೃತಿಯಲ್ಲಿ ಅಲ್ಲೋಲ-ಕಲ್ಲೋಲ ಆಗಲಿದ್ದು, ಈಗಾಗಲೇ ಸಾಕಷ್ಟು ಮಳೆಯಾಗಿದ್ದರೂ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಲಕ್ಷಣವಿದೆ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಯೋಗೀಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯೂ ಮಳೆಯ ಲಕ್ಷಣವಿದ್ದು, ಕಾರ್ತಿಕ ಮಾಸದಲ್ಲಿ ಜನರಿಗೆ ತುಸು ಹೆಚ್ಚು ತೊಂದರೆ ಆಗುವ ಸಾಧ್ಯತೆಗಳಿವೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣ ಇದೆ. ಇದಲ್ಲದೆ ರಾಜ್ಯಕ್ಕೆ ಒಂದು ಅವಘಡ ಆಗಲಿದೆ. ಭೂಮಿಯಲ್ಲಿ ಇರುವ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಪ್ರಕೃತಿ ಅಲ್ಲೋಲ, ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ. ಮಳೆ, ಗಾಳಿ, ಗುಡುಗು, ಜನರಲ್ಲಿ ಅಶಾಂತಿ, ಭೂಮಿ ನಡುಗುವುದು, ಕುಸಿಯುವುದರ ಕುರಿತು ಈ ಹಿಂದೆಯೇ ಹೇಳಿದ್ದೆ. ಮುಂದೆಯೂ ಅದೇ ಪರಿಸ್ಥಿತಿ ಎದುರಾಗಲಿದೆ. ಕಾಡಿನಿಂದ ನಾಡಿನತ್ತ ಪ್ರಾಣಿಗಳು ಬರುತ್ತವೆ.

ಈ ಸಂವತ್ಸರದ ಕೊನೆಯವರೆಗೂ ಈ ತೊಂದರೆ ಇದೆ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದ್ದು, ಅಪಮೃತ್ಯು ಹೆಚ್ಚಾಗಲಿವೆ. ಒಂದೆಡೆ ಪ್ರಕೃತಿ ವಿಕೋಪ ಇನ್ನೊಂದೆಡೆ ಮತಾಂಧತೆ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ, ಕಲಹಗಳು ನಡೆಯಲಿವೆ ಎಂದರು.

ಈ ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗಲ್ಲ. ಗುಡ್ಡಗಳ ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ನೋವಾಗುವ ಸಾಧ್ಯತೆ ಹೆಚ್ಚು. ಅದಕ್ಕಾಗಿ ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು. ಯುಗಾದಿ ಕೊನೆವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಸಾವು ನೋವು ಸಂಭವಿಸುತ್ತವೆ. ಮುಂದಿನ ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿವೆ ಎಂದರು.


Spread the love

About Laxminews 24x7

Check Also

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ. ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

Spread the love ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ಚಾಕುವಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ