Breaking News

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳಿ ಬಂಧನ

Spread the love

ಬೆಳಗಾವಿ: ಜಿಲ್ಲೆಯ ಸವದತ್ತಿಯ ಯಲ್ಲಮ್ಮನಗುಡ್ಡ ರೇಣುಕಾ ದೇವಸ್ಥಾನದ ಜಾತ್ರೆಯಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳಿಯನ್ನು ಸವದತ್ತಿ ಪೊಲೀಸರು ಬಂಧಿಸಿ, 40 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬಂಧಿತ ಮಹಿಳೆಯ ಮೂಲವು ಮಹಾರಾಷ್ಟ್ರದ ಸೊಲ್ಲಾಪುರವಾಗಿದ್ದು, ಕಳೆದ ಸೆ.30ರಂದು ಧಾರವಾಡದ ಅನ್ನಪೂರ್ಣ ಸಂದಿಗವಾಡ ಎಂಬುವವರ ಕೊರಳಲ್ಲಿದ್ದ 40ಗ್ರಾಂ ತೂಕದ ಮಂಗಳಸೂತ್ರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಳು. ಈ ಬಗ್ಗೆ ಚಿನ್ನಾಭರಣ ಕಳೆದುಕೊಂಡ ಮಹಿಳೆಯು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಹೆಚ್ಚುವರಿ ಎಸ್ಪಿ ಮಹಾನಿಂಗ ನಂದಗಾಂವಿ, ಡಿಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಕರುಣೀಶಗೌಡ ಮಾರ್ಗದರ್ಶನದಲ್ಲಿ ಪಿಎಸ್ಐ ಮಲಕನಗೌಡ ಬಿರಾದರ ತಂಡವು ಆರೋಪಿಯನ್ನು ಬಂಧಿಸಿ, 40ಗ್ರಾಂ ತೂಕದ ಅಂದಾಜು 2 ಲಕ್ಷ ರೂ. ಬೆಲೆಬಾಳುವ ಬಂಗಾರದ ಮಂಗಳ ಸೂತ್ರವನ್ನು ಜಪ್ತಿ ಮಾಡಿದ್ದಾರೆ.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ