Breaking News

ಹಳೆ ದ್ವೇಷದ ಹಿನ್ನೆಲೆಇಬ್ಬರು ಯುವಕರ ಕೊಲೆ

Spread the love

ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆ‌ ಎದುರು ಗುರುವಾರ ರಾತ್ರಿ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಸುಳೇಭಾವಿ ಗ್ರಾಮದ ರಣಧೀರ ಮಹೇಶ ಅಲಿಯಾಸ್ ರಾಮಚಂದ್ರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಯುವಕರನ್ನು ಹತ್ಯೆ ಮಾಡಲಾಗಿದೆ.

 

ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಶಿವಾಜಿ‌ಮಹಾರಾಜರ ಪ್ರತಿಮೆ ಎದುರು ಕೊಲೆ ಮಾಡಲಾಗಿದೆ. ಕೊಲೆ ಯಾರು ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ. ಮಾತೀಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಮಾರಿಹಾಳ ಇನ್ಸ್ಪೆಕ್ಟರ್ ಬಸ್ಸಾಪೂರೆ ಸೇರಿ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ

Spread the love ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ