Breaking News

ಸದ್ಯದಲ್ಲೇ ‘ಬಸ್ ಯಾತ್ರೆ’ಗೆ ದಿನಾಂಕ ನಿಗದಿ: ಮಂಡ್ಯದಲ್ಲಿ ಸಿದ್ದರಾಮಯ್ಯ ಘೋಷಣೆ

Spread the love

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಬಹು ನಿರೀಕ್ಷಿತ ಬಸ್‌ ಯಾತ್ರೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಡ್ಯದಲ್ಲಿ ಈ ವಿಚಾರ ತಿಳಿಸಿದ್ದಾರೆ.

 

ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್‌ ಅಥವಾ ನವೆಂಬರ್‌ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್‌ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ತಿಂಗಳು ಕೊನೆಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಸ್‌ ಯಾತ್ರೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ನಾನು ಎರಡು ತಂಡಗಳಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತೇವೆ. ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ಬಸ್‌ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ವರಿಷ್ಠರನ್ನು ಸದ್ಯದಲ್ಲೇ ಭೇಟಿ ಮಾಡಿ ಅವರ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ