Breaking News

ಬೊಮ್ಮಾಯಿಯವರೇ ಬಿಎಸ್‌ವೈ ಜೊತೆ ತಿರುಗಾಡಿದ್ರೆ ನೀವೂ ಲಾಗ ಹೊಡಿಯುತ್ತೀರಿ: ಯತ್ನಾಳ್​

Spread the love

ಬೆಳಗಾವಿ: ಬೊಮ್ಮಾಯಿಯವರೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ. ಇಲ್ಲವಾದ್ರೆ ನೀವು ಪರ್ಮನೆಂಟ್ ಆಗಿ ಮಾಜಿ ಮುಖ್ಯಮಂತ್ರಿ ಆಗ್ತೀರಿ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದರು.

ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಪಂಚಮಸಾಲಿ ಲಿಂಗಾಯತ ‌ಸಮುದಾಯಕ್ಕೆ 2ಎ ಮೀಸಲಾತಿ ಸಂಬಂಧ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿದರು. ಬೊಮ್ಮಾಯಿಯವರೇ ಬಿಎಸ್‌ವೈ ಜೊತೆ ತಿರುಗಾಡಿದ್ರೆ ನೀವು ಲಾಗ ಹೊಡೆಯುತ್ತೀರಿ.

ಮೊನ್ನೆ ಅಧಿವೇಶನದಲ್ಲಿ ನಾನು ಪಂಚಮಸಾಲಿ ವಿರೋಧಿ ಅಲ್ಲಾ ಅಂತ ಯಡಿಯೂರಪ್ಪ ಭಾಷಣ ಮಾಡಿದ್ರು. ಹಾಗಾದ್ರೆ, ಸಿಎಂ ಆದ ವೇಳೆ ಪಂಚಮಸಾಲಿ ಸಮುದಾಯಕ್ಕೆ ಏಕೆ ಮೀಸಲಾತಿ ನೀಡಲಿಲ್ಲ. ಮೀಸಲಾತಿಗಾಗಿ ಸೂಚಿಸಿದ್ದೇನೆ ಅಂದ್ರು, ಸಿಎಂ ಆಗಿದ್ದವರು ಸೂಚಿಸುತ್ತಾರಾ. ಬೊಮ್ಮಾಯಿಯವರೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದ್ರೆ ನೀವು ಪರ್ಮನೆಂಟ್ ಆಗಿ ಮಾಜಿ ಸಿಎಂ ಆಗುತ್ತೀರಿ ಎಂದು ಎಚ್ಚರಿಕೆ ರವಾನಿಸಿದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ