Breaking News
Home / Uncategorized / ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥ

ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥ

Spread the love

ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್‌ನ ಗಜಾನನ ಗವಾನೆ ಮಾನಸಿಕ ಅಸ್ವಸ್ಥನನ್ನು ಉಪಚರಿಸಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಹೌದು ಇಂದು ಶನಿವಾರ ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀನಗರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಬೆತ್ತಲೆಯಾಗಿ ಓಡಾಡುವ ಮೂಲಕ ಅವಾಂತರ ಎಸಗಿದ್ದಾನೆ. ಈ ವೇಳೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್ ನ ಗಜಾನನ ಗವಾನೆ ಅವರಿಗೆ ಆ ಭಾಗದ ಮಹಿಳೆಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಮನೋಹರ ಶೇಖರಗೋಳ ಹಾಗೂ ಸುಹಾಸ್ ಲೋಹರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಗಜಾನನ ಗವಾನೆ, +

ಚರಂಡಿ ನೀರಿನಲ್ಲಿ ಮಲಗಿದ್ದ ಯುವಕನನ್ನು ಹಿಡಿದು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಗೆ ಕರೆ ಮಾಡಿ ಆತನನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

Spread the loveಬೆಳಗಾವಿ: ‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ