Breaking News

ತಡರಾತ್ರಿ ಆಗಮಿಸಿದ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ B.L. ಸಂತೋಷ್ ಶಾಲು ಹೊದೆಸಿ ಸ್ವಾಗತಿಸಿದ ಬಾಲಚಂದ್ರ ಜಾರಕಿಹೊಳಿ ಇಂದು ಕನ್ಹೇರಿ ಮಠದ ಸಮಾವೇಶದಲ್ಲಿ ಭಾಗಿ

Spread the love

ಬೆಳಗಾವಿ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬೆಳಗಾವಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ಅವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತಲುಪಿದರು.

ಮಾಜಿ ಸಚಿವ, ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ ಶಾಲು ಹೊದೆಸಿ ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಮಹಾಂತೇಶ ದೊಡ್ಡಗೌಡರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ ಹಾಗೂ ಡಾ.ರಾಜೇಶ ನೇರ್ಲಿ, ಮಹಾಂತೇಶ ವಕ್ಕುಂದ ಮೊದಲಾದವರು ಈ ಸಂದರ್ಭದಲ್ಲಿದ್ದರು.

ಸೋಮವಾರ ಬೆಳಗ್ಗೆ ಕನ್ಹೇರಿ ಮಠದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ ಬೆಳಗಾವಿಯಲ್ಲಿ ಭಾರತೀಯ ಜನತಾಪಾರ್ಟಿಯ ಕಾರ್ಯಕರ್ತರ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ