Breaking News

ಧಾರವಾಡ ರೈಲು ನಿಲ್ದಾಣಕ್ಕೆ ಪ್ರಹ್ಲಾದ್ ಜೋಶಿ ಭೇಟಿ, ಸಿದ್ಧತಾ ಕಾರ್ಯ ಪರಿಶೀಲನೆ

Spread the love

ಧಾರವಾಡ: ರೈಲು ನಿಲ್ದಾಣದ ನೂತನ ಕಟ್ಟದ ಉದ್ಘಾಟನೆ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿನ್ನೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಧಾರವಾಡ ರೈಲು ನಿಲ್ದಾಣ ಹಾಗೂ ಸಣ್ಣ ರೈಲು ನಿಲ್ದಾಣಗಳ ಅಭಿವೃದ್ಧಿಯಾಗಬೇಕು ಎಂಬ ಕನಸು ಇತ್ತು. ಬಹಳ‌ ಜಗಳ ಮಾಡಿ ಆಗಿನ ಸರ್ಕಾರದ ಜೊತೆ ನಾವು ಹುಬ್ಬಳ್ಳಿಯ ರೈಲು ನಿಲ್ದಾಣ ಮಂಜೂರು ಮಾಡಿಸಿದ್ದು,‌ ಧಾರವಾಡದಲ್ಲಿ ಸ್ಥಳೀಯ ಕಲಾವಿದರ ಜೊತೆ ಸೇರಿ ಉತ್ತಮ ರೈಲು‌‌ ನಿಲ್ದಾಣ ಮಾಡಿದ್ದೇವೆ. ಇದಕ್ಕೆ ಮೋದಿ ಅವರ ಆಶೀರ್ವಾದ ಇದೆ ಎಂದರು.

ಈ ಹಿಂದೆ ಸುರೇಶ್​ ಅಂಗಡಿ ಅವರು ರೈಲ್ವೆ ಸಚಿವರಾಗಿದ್ದಾಗ ಇಲ್ಲಿಗೆ ಬಂದು ಹೋಗುತ್ತಿದ್ದರು. ಇದೀಗ ಬಹಳ ವರ್ಷಗಳ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಧಾರವಾಡಕ್ಕೆ ಬರುತ್ತಿದ್ದಾರೆ. ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ‌. ರಾಜ್ಯದ ಪರವಾಗಿ ಅನೇಕ ಬೇಡಿಕೆಗಳನ್ನು ಸಚಿವರಿಗೆ ಈಗಾಗಲೇ ಮನವರಿಕೆ ಮಾಡಿದ್ದೇನೆ. ಬೇಡಿಕೆ ಪಟ್ಟಿಯಲ್ಲಿರುವ ಅಗತ್ಯ ಯೋಜನೆಗಳ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ