Breaking News

ಸಂಸದ ಬಿ.ವೈ ರಾಘವೇಂದ್ರೇ ಬ್ಯಾಂಕ್ ಖಾತೆಗೂ ಕನ್ನ ಹಾಕಿದ ಹ್ಯಾಕರ್ಸ್: ಬರೋಬ್ಬರಿ 16 ಲಕ್ಷ ಧೋಖಾ.!

Spread the love

ಶಿವಮೊಗ್ಗ: ಸಂಸದ ಬಿ.ವೈ ರಾಘವೇಂದ್ರ ( MP BY Vijayendra ) ಅವರ ಬ್ಯಾಂಕ್ ಖಾತೆಗೂ, ಆನ್ ಲೈನ್ ವಂಚಕರು ಕನ್ನ ಹಾಕಿದ್ದಾರೆ. ಮೂಲಕ ಬರೋಬ್ಬರಿ 16 ಲಕ್ಷ ಲಪಟಾಯಿಸಿರೋದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಮಾತನಾಡಿರುವಂತ ಸಂಸದ ಬಿ.ವೈ ರಾಘವೇಂದ್ರ ಅವರು, ದೇಶದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಲಾಗಿದೆ.

ಇದೇ ಸಂದರ್ಭದಲ್ಲಿ ಗ್ರಾಹಕರು ಕೂಡ ಎಚ್ಚರಿಕೆ ವಹಿಸಬೇಕಿದೆ ಎಂದರು.

ಬ್ಯಾಂಕ್ ನಲ್ಲಿ ಖಾತೆ ( Bank Account ) ಹೊಂದಿರುವಂತ ಪ್ರತಿಯೊಬ್ಬರು ಆನ್ ಲೈನ್ ವಂಚಕರ ( Online Scam ) ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಒಟಿಪಿ ನಂಬರ್ ಬಗ್ಗೆ ಯಾರಾದರೂ ಮಾಹಿತಿ ಕೇಳಿದರೇ ಕೊಡಲೇ ಬಾರದು. ಈಗ ವಾಟ್ಸಾಪ್ ಮೂಲಕವೂ ಒಟಿಪಿ ಕೇಳುತ್ತಿದ್ದಾರೆ. ಯಾರೂ ಕೊಡಬಾರದು ಎಂದರು.

ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದಂತೆ ಹೊಂದಿರುವಂತ ಖಾತೆಯಿಂದ 16 ಲಕ್ಷ ಹಣ ದಿಢೀರ್ ವರ್ಗಾವಣೆಗೊಂಡಿತ್ತು. ಹೀಗೆ ವರ್ಗಾವಣೆಗೊಂಡ ಹಣ ನಾನು ಮಾಡಿದ್ದಲ್ಲ. ಈ ಸಂಬಂಧ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದೇನೆ. ತನಿಖೆ ನಡೆಸಲಾಗುತ್ತಿದ್ದು, ಮುಂಬೈನಲ್ಲಿ ನನ್ನ ಬ್ಯಾಂಕ್ ಖಾತೆಗೆ ಕನ್ನ ಹಾಕಿದಂತ ಹ್ಯಾಕರ್ ಒಬ್ಬರನ್ನು ಪತ್ತೆ ಹಚ್ಚಿ, ಬಂಧಿಸಿದರು. ಆ ಬಳಿಕ ನನ್ನ ಖಾತೆಯಿಂದ ಲಪಟಾಯಿಸಿದಂತ ಹಣ ವಾಪಾಸ್ ಬಂತು ಎಂದು ಹೇಳಿದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ