Breaking News

“ಮನೆ ತೆರವು ಮಾಡಿದರೆ ಪೆಟ್ರೋಲ್‌ ಸುರಿದು ಆತ್ಮಹತ್ಯೆ”: ಅಧಿಕಾರಿಗಳಿಗೆ ಶಾಕ್‌ ಕೊಟ್ಟ ದಂಪತಿ!

Spread the love

ಕೆ.ಆರ್. ಪುರ: ಕೆಆರ್ ಪುರದಲ್ಲಿ ಮೂರನೇ ದಿನವೂ ತೆರವು ಕಾರ್ಯ ಮುಂದುವರೆದಿದೆ. ಮೂರನೇ ದಿನಕ್ಕೆ ತೆರವಿಗೆ ಬಂದ ಬಿಬಿಎಂಪಿ ಅಧಿಕಾರಿಗಳಿಗೆ ಮನೆ ತೆರವು ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ದಂಪತಿಗಳು ಬೆದರಿಸಿರುವ ಘಟನೆ ಬಸವನಪುರ ಮುಖ್ಯರಸ್ತೆಯ ಎಸ್.ಆರ್.ಲೇಔಟ್ ನಲ್ಲಿ ನಡೆದಿದೆ.

 

ಸೋನಾ ಸೇನ್ ಮತ್ತು ಸುನಿಲ್ ಸಿಂಗ್ ಎಂಬ ದಂಪತಿಗಳು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ತಮ್ಮ ಮನೆಯನ್ನು ತೆರವು ಮಾಡಲು ಬಂದ ಅಧಿಕಾರಿಗಳ ಮುಂದೆ ಪೆಟ್ರೋಲ್‌ ಕ್ಯಾನ್‌ ಹಿಡಿದು, ನಮ್ಮ ಮನೆ ತೆರವು ಮಾಡಿದರೆ ಮೈ ಮೇಲೆ ಪೆಟ್ರೋಲ್‌ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಅಧಿಕಾರಿಗಳ ತಲೆನೋವು ಮಾಡಿದ್ದಾರೆ.

ನಾವು ಇಲ್ಲಿಯವರೇ. ಇಲ್ಲಿ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಮನೆ ಕಟ್ಟುವಾಗ ಇಲ್ಲದ ರಾಜಕಾಲುವೆ ಈಗ ಎಲ್ಲಿಂದ ಬಂತು? ನಾವೇನು ಪಾಕಿಸ್ತಾನದಿಂದ ಬಂದವರಾ? ನಾವೂ ಕರ್ನಾಟಕದ ಜನರೇ ನಮಗೆ ಇಷ್ಟೊಂದು ತೊಂದರೆ ಕೊಡುತ್ತಿದ್ದೀರಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರು.

ಬೆಂಕಿ ಹಚ್ಚಿಕೊಂಡು ಅನಾಹುತ ಮಾಡಿಕೊಳ್ಳಬೇಡಿ ಎಂದು ಒಂದೆಡೆ ಸ್ಥಳೀಯರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೊಂದೆಡೆ ನಮ್ಮ ಕನಸಿನ ಮನೆ ಡೆಮಾಲಿಷ್ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ದಂಪತಿಗಳು ಪಟ್ಟು ಹಿಡಿದಿದ್ದಾರೆ.

ಪೊಲೀಸರು ನಿಮಗೆ ನ್ಯಾಯ ಕೊಡಿಸುತ್ತೇವೆ ದುಡುಕಬೇಡಿ ಎಂದು ಮನವೊಲಿಸಲು ಹರಸಾಹಸ ಪಡುತ್ತಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ