Breaking News
Home / ಜಿಲ್ಲೆ / ಬೆಂಗಳೂರು / ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

Spread the love

ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಚಿವರ ಕಾರಿನ ಚಾಲಕ ಮತ್ತು ಮನೆಯ ಕೆಲಸಗಾರನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮಾಧುಸ್ವಾಮಿ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು ಎಂಬ ಮಾಹಿತಿ ಲಭಿಸಿದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ