Breaking News

ಪ್ರಹ್ಲಾದ್ ಜೋಶಿಗರಂಒಂದು ಕ್ಷಣ ಕಕ್ಕಾಬಿಕ್ಕಿಯಾದಅಧಿಕಾರಿಗಳು

Spread the love

ಧಾರವಾಡ: ಮಾಸ್ಕ್ ಇಲ್ಲದೇ ಸಭೆಗೆ ಆಗಮಿಸಿದ್ದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆ ತೆಗದುಕೊಂಡ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಜೋಶಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯ ಮೊದಲು ಎಲ್ಲ ಅಧಿಕಾರಿಗಳು ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಕೇಂದ್ರ ಸಚಿವರ ಸಭೆಗೆ ಮಾಸ್ಕ್ ಇಲ್ಲದೇ ಮಹಿಳಾ ಅಧಿಕಾರಿ ಭಾಗಿಯಾಗಿದ್ದರು.

ವಿಶೇಷ ಭೂಸ್ವಾಧಿನಾಧಿಕಾರಿ ಶಾರದಾ ಕೋಲ್ಕಾರ್ ಅವರಿಗೆ ಕೇಂದ್ರ ಸಚಿವರು ಸಭೆಯಲ್ಲಿ ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕೆ ತರಾಟೆಗೆ ತೆಗೆದುಕೊಂಡರು. ಮಾಸ್ಕ್ ಇಲ್ಲದೇ ಕುಳಿತಿದ್ದೀರಿ, ಮಾಸ್ಕ್ ಇಲ್ಲ ಅಂದರೆ ಹೊರಗೆ ಹೋಗಿ ಬಿಡಿ ಎಂದು ಕೇಂದ್ರ ಸಚಿವ ಜೋಶಿ ಗರಂ ಆಗುತಿದ್ದಂತೆಯೇ ಶಾರದಾ ಅವರು ಮಾಸ್ಕ್ ತರಿಸಿ ಹಾಕಿಕೊಂಡರು. ಸಚಿವರು ಗರಂ ಆಗುತ್ತಿದ್ದಂತೆಯೇ ಉಳಿದ ಅಧಿಕಾರಿಗಳು ಒಂದು ಕ್ಷಣ ಕಕ್ಕಾಬಿಕ್ಕಿಯಾದರು.


Spread the love

About Laxminews 24x7

Check Also

ಧಾರವಾಡದ ಹಿರಿಯ ಪತ್ರಿಕಾ ಫೋಟೋಗ್ರಾಫರ್ ಆರ್ ಕೆ ( ರಾಮಚಂದ್ರ ಕುಲಕರ್ಣಿ) ಇನ್ನಿಲ್ಲ

Spread the loveಧಾರವಾಡ: ಆರ್ ಕೆ ಖ್ಯಾತಿಯ ಹಿರಿಯ ಪತ್ರಿಕಾ ಪೋಟೋಗ್ರಾಫರಾಗಿ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ರಾಮಚಂದ್ರ ಕುಲಕರ್ಣಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ