Breaking News
Home / ಜಿಲ್ಲೆ / ಧಾರವಾಡ / ಪ್ರಹ್ಲಾದ್ ಜೋಶಿಗರಂಒಂದು ಕ್ಷಣ ಕಕ್ಕಾಬಿಕ್ಕಿಯಾದಅಧಿಕಾರಿಗಳು

ಪ್ರಹ್ಲಾದ್ ಜೋಶಿಗರಂಒಂದು ಕ್ಷಣ ಕಕ್ಕಾಬಿಕ್ಕಿಯಾದಅಧಿಕಾರಿಗಳು

Spread the love

ಧಾರವಾಡ: ಮಾಸ್ಕ್ ಇಲ್ಲದೇ ಸಭೆಗೆ ಆಗಮಿಸಿದ್ದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆ ತೆಗದುಕೊಂಡ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಜೋಶಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯ ಮೊದಲು ಎಲ್ಲ ಅಧಿಕಾರಿಗಳು ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಕೇಂದ್ರ ಸಚಿವರ ಸಭೆಗೆ ಮಾಸ್ಕ್ ಇಲ್ಲದೇ ಮಹಿಳಾ ಅಧಿಕಾರಿ ಭಾಗಿಯಾಗಿದ್ದರು.

ವಿಶೇಷ ಭೂಸ್ವಾಧಿನಾಧಿಕಾರಿ ಶಾರದಾ ಕೋಲ್ಕಾರ್ ಅವರಿಗೆ ಕೇಂದ್ರ ಸಚಿವರು ಸಭೆಯಲ್ಲಿ ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕೆ ತರಾಟೆಗೆ ತೆಗೆದುಕೊಂಡರು. ಮಾಸ್ಕ್ ಇಲ್ಲದೇ ಕುಳಿತಿದ್ದೀರಿ, ಮಾಸ್ಕ್ ಇಲ್ಲ ಅಂದರೆ ಹೊರಗೆ ಹೋಗಿ ಬಿಡಿ ಎಂದು ಕೇಂದ್ರ ಸಚಿವ ಜೋಶಿ ಗರಂ ಆಗುತಿದ್ದಂತೆಯೇ ಶಾರದಾ ಅವರು ಮಾಸ್ಕ್ ತರಿಸಿ ಹಾಕಿಕೊಂಡರು. ಸಚಿವರು ಗರಂ ಆಗುತ್ತಿದ್ದಂತೆಯೇ ಉಳಿದ ಅಧಿಕಾರಿಗಳು ಒಂದು ಕ್ಷಣ ಕಕ್ಕಾಬಿಕ್ಕಿಯಾದರು.


Spread the love

About Laxminews 24x7

Check Also

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.

Spread the loveಧಾರವಾಡ, ಆಗಸ್ಟ್‌, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ