Breaking News

ಯತ್ನಾಳ್​ಗೆ ನೋಟಿಸ್ ಜಾರಿ, ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್: ಅರುಣ್​ ಸಿಂಗ್

Spread the love

ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್ ಮಾಡದಂತೆ ಹಾಗೂ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನ ಸಚಿವ ಮಾಡಿಲ್ಲ. ಅದಕ್ಕಾಗಿ ಹೀಗೆ ಮಾತಾಡ್ತಿದ್ದಾರೆ. ಯಾರೇ ಆದ್ರು ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಪಕ್ಷದ ಹಿರಿಯ ನಾಯಕರನ್ನ ಗೌರವಿಸಬೇಕು. ಯತ್ನಾಳ್ ಅವರ ಇಂತಹ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ್ದೇವೆ. ಬಿಜೆಪಿ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನ್​ ಮಾಡಿದ್ದೇವೆ. ಈ ಬಗ್ಗೆ ಪಕ್ಷ ಸೂಕ್ತವಾದ ನಿರ್ಧಾರ ಕೈಗೊಳ್ಳಲಿದೆ. ಯಾರು ತಮ್ಮ ಸ್ವಾರ್ಥವನ್ನ ಇಟ್ಟುಕೊಂಡು ಮಾತನಾಡಬಾರದು ಎಂದರು.

ಬಿಎಸ್‌ವೈ ಜೊತೆ ಬೊಮ್ಮಾಯಿ ಒಟ್ಟಾಗಿ ವಿಜಯಸಂಕಲ್ಪ ಯಾತ್ರೆ ಮಾಡಿದ್ರೆ ಬಿಜೆಪಿ ಸೋಲುತ್ತದೆ ಎಂಬ ಯತ್ನಾಳ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಅವರ ಹೇಳಿಕೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಯತ್ನಾಳ್ ಅವರ ಹೇಳಿಕೆಯನ್ನ ಪಕ್ಷದ ಕಾರ್ಯಕರ್ತರು ನಿರ್ಲಕ್ಷ್ಯ ಮಾಡುತ್ತಾರೆ. ಅವರು ನಮ್ಮ ಕೋರ್ ಕಮಿಟಿ ಸದಸ್ಯರೂ ಅಲ್ಲ. ಇಂತಹ ಹೇಳಿಕೆ ಪಕ್ಷದ ಕಾರ್ಯಕರ್ತರಿಗೂ ಇಷ್ಟ ಆಗಲ್ಲ. ಯತ್ನಾಳ್ ಅವರು ಬಿಜೆಪಿಯಿಂದ ಗೆದ್ದಿದ್ದಾರೆ. ಈ ಹಿಂದೆ ಪಕ್ಷದಿಂದ ಹೊರಗೆ ಹೋಗಿದ್ರು. ಬಿಜೆಪಿ ಎಲ್ಲಾ ಸಮಾಜ, ಜನಾಂಗದ ಪರವಾಗಿ ಕೆಲಸ ಮಾಡುತ್ತಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂತಾ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ