Breaking News

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ಜಿಲ್ಲೆಯಲ್ಲಿ ಈ ಕಂತಿನಲ್ಲಿ 5.38 ಲಕ್ಷ ರೈತರಿಗೆ ₹ 107 ಕೋಟಿ ಹಣ ಬಿಡುಗಡೆ

Spread the love

ಬೆಳಗಾವಿ: ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ಜಿಲ್ಲೆಯಲ್ಲಿ ಈ ಕಂತಿನಲ್ಲಿ 5.38 ಲಕ್ಷ ರೈತರಿಗೆ ₹ 107 ಕೋಟಿ ಹಣ ಬಿಡುಗಡೆ ಮಾಡಲಾಗಿದೆ’ ಎಂದು ಸಂಸದೆ ಮಂಗಲಾ ಅಂಗಡಿ ತಿಳಿಸಿದರು.

ಇಲ್ಲಿನ ಎಪಿಎಂಸಿ ಆವಣದಲ್ಲಿ ಸೋಮವಾರ ಪಿ.ಎಂ. ಕಿಸಾನ್‌ ಸಮೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ 600 ಕಡೆ ಈ ಕೇಂದ್ರಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ.

ಇದರ ಜೊತೆಗೆ 12ನೇ ಕಂತಿನ ಹಣವನ್ನೂ ರೈತರಿಗೆ ಬಿಡುಗಡೆ ಮಾಡಿದ್ದಾರೆ’ ಎಂದರು.

‘ಮೋದಿ ಅವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. 2014ರ ನಂತರ ದೇಶದಲ್ಲಿನ ಕೃಷಿಕರ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತ ಬಂದಿದೆ. ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಹೊಸ ಮಾರುಕಟ್ಟೆ ವ್ಯವಸ್ಥೆಯನ್ನು ಜಾರಿಗೆ ತರುತ್ತಲಿದ್ದಾರೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು’ ಎಂದರು.

ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ‘ರೈತರು ಬೆಳೆದ ಬೆಳೆಗಳಿಗೆ ಉತ್ತಮ ದರ ಪಡೆದುಕೊಳ್ಳಲು ನಿರಂತರ ಮಾರುಕಟ್ಟೆ ಮಾಹಿತಿ ಪಡೆಯುತ್ತಿರಬೇಕು. ಇದರಿಂದ ದಲ್ಲಾಳಿಗಳಿಂದ ಮೋಸ ಹೋಗದೆ, ನೇರವಾಗಿ ಮಾರುಕಟ್ಟೆಗೆ ತಮ್ಮ ಉತ್ಪಾದನೆ ಮಾರಾಟ ಮಾಡಲು ಅನಕೂಲವಾಗುತ್ತದೆ’ ಎಂದರು.


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ