Breaking News

ಸಾಲು ಸಾಲು ರಜೆ ಹೊತ್ತಲ್ಲಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: 1500 ಹೆಚ್ಚುವರಿ ಬಸ್, ಟಿಕೆಟ್ ನಲ್ಲಿ ವಿಶೇಷ ರಿಯಾಯಿತಿ

Spread the love

ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ವೀಕೆಂಡ್ ರಜೆ ಸೇರಿದಂತೆ ನರಕ ಚತುರ್ದಶಿ, ಅಮಾವಾಸ್ಯೆ, ಬಲಿಪಾಡ್ಯಮಿ ಹೀಗೆ ಸಾಲು ಸಾಲು ರಜೆಯ ಸಂದರ್ಭದಲ್ಲಿ ಊರಿಗೆ ಹೋಗುವವರು ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ.

ಹೀಗಾಗಿ ಕೆಎಸ್‌ಆರ್ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ.

ಅ. 21 ರಿಂದ 23ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಮತ್ತು ಹೊರ ರಾಜ್ಯಗಳ ನಾನಾ ಸ್ಥಳಗಳಿಗೆ ಹೆಚ್ಚುವರಿಯಾಗಿ 1,500 ವಿಶೇಷ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಅ. 26 ರಿಂದ 30ರವರೆಗೆ ನಾನಾ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳು ಮರಳುತ್ತವೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಶಿವಮೊಗ್ಗ, ಹಾಸನ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ ಕ್ಕೆ ಬಸ್ ಸಂಚರಿಸಲಿವೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ