Home / ಜಿಲ್ಲೆ / ಚಿತ್ರದುರ್ಗ / ಮುರುಘಾ ಮಠದಲ್ಲಿದೆ ಶಾಮನೂರು, ಯಡಿಯೂರಪ್ಪನವರ ದುಡ್ಡು’ : ಮಾಜಿ ಸಚಿವೆಯ ಸ್ಪೋಟಕ ಆಡಿಯೋ ವೈರಲ್

ಮುರುಘಾ ಮಠದಲ್ಲಿದೆ ಶಾಮನೂರು, ಯಡಿಯೂರಪ್ಪನವರ ದುಡ್ಡು’ : ಮಾಜಿ ಸಚಿವೆಯ ಸ್ಪೋಟಕ ಆಡಿಯೋ ವೈರಲ್

Spread the love

ಚಿತ್ರದುರ್ಗ : ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ ನಂತರ ದಾವಣಗೆರೆಯ ವಿರಕ್ತ ಮಠದ ಶ್ರೀ ಬಸವಪ್ರಭು ಅವರನ್ನು ಮುರುಘಾ ಮಠದ ಉಸ್ತುವಾರಿ ಪೀಠಾಧಿಪತಿಯಾಗಿ ನೇಮಿಸಲಾಗಿದೆ.

 

ಇದರ ನಡುವೆ ಮಾಜಿ ಸಚಿವೆ ರಾಣಿ ಸತೀಶ ಆಡಿಯೋ ಸಂಭಾಷಣೆಯೊಂದು ವೈರಲ್ ಆಗಿದೆ. ಮಠದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ಶಾಮನೂರು ಶಿವಶಂಕರಪ್ಪನವರ ಹಣವಿದೆ ಎನ್ನುವ ವಿಚಾರ ಈ ಆಡಿಯೋದಲ್ಲಿದೆ. ಚಿತ್ರದುರ್ಗ ವೀರಶೈವ ಮಹಾಸಭಾದ ಜಿಲ್ಲಾದ್ಯಕ್ಷ ಮಹಡಿ ಶಿವಮೂರ್ತಿ ಅವರ ಜೊತೆ ರಾಣಿ ಸತೀಶ ಮಾತನಾಡಿದ್ದು, ಆಡಿಯೋ ಸಂಭಾಷಣೆ ವೈರಲ್ ಆಗಿದೆ.

ಮುರುಘಾ ಮಠದಲ್ಲಿ ಶಾಮನೂರು, ಯಡಿಯೂರಪ್ಪನವರ ಹಣವಿದೆ: ಮಾಜಿ ಸಚಿವರ ಸ್ಫೋಟಕ ಆಡಿಯೋ ವೈರಲ್

ಶಾಮನೂರು ಹಾಗೂ ಯಡಿಯೂರಪ್ಪನವರ ಹಣ ಮುರುಘಾಶ್ರೀ ಬಳಿಯಿದೆ ಎಂದು ಜನ ಮಾತಾಡ್ತಾರೆ. ಇನ್ನೇನು ಹುಳುಕಿದೆಯೋ ಮುಚ್ಚಿ ಹಾಕಲು ಬಸವಪ್ರಭು ಶ್ರೀಗಳನ್ನ ನೇಮಕ ಮಾಡಿದ್ದಾರೆ. ಸಿಎಂ ಆದಷ್ಟು ಬೇಗ ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಆಡಿಯೋದಲ್ಲಿ ಒತ್ತಾಯಿಸಿದ್ದಾರೆ. ರಾಣಿ ಸತೀಶ ಆಡಿಯೋ ಸಂಭಾಷಣೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಡಿಯೋದ ಸತ್ಯಾನುಸತ್ಯತೆ ಬಗ್ಗೆ ತನಿಖೆಯಿಂದಲೇ ತಿಳಿದು ಬರಬೇಕಾಗಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ