ಬೆಂಗಳೂರು: ಬಿಜೆಪಿಯವರಿಗೆ ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು, ತಾಕತ್ತು ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ. ಆದರೆ, ಬಿಜೆಪಿ ನೀಡಿದ ಉತ್ತರ – 0. ತಮ್ಮದೇ ಪ್ರಣಾಳಿಕೆಯಲ್ಲಿನ ಅಂಶಗಳ ಬಗ್ಗೆ ಬಿಜೆಪಿಗೆ ಮಾತನಾಡುವ ಧೈರ್ಯವಿರದಿರುವುದು ಸರ್ಕಾರದ ವಿಫಲತೆಗೆ ನಿದರ್ಶನ’ ಎಂದು ಕಾಂಗ್ರೆಸ್ ಕಿಡಿಕಾರಿದೆ.