Breaking News

ರಾಜ್ಯದಲ್ಲಿ ಹಳ್ಳ ಹಿಡಿದ ಫಸಲ್‌ ವಿಮೆ ಯೋಜನೆ:ರೈತರಿಗೆ ಸಿಗುತ್ತಿಲ್ಲ ಪರಿಹಾರ

Spread the love

ಬೆಂಗಳೂರು : ಕಷ್ಟ ಕಾಲದಲ್ಲಿ ರೈತರ ನೆರವಿಗೆ ಬರಬೇಕಿದ್ದ ಬೆಳೆ ವಿಮೆ ಯೋಜನೆಯು ರಾಜ್ಯದಲ್ಲಿ ಅನ್ನದಾತರ ವಿಶ್ವಾಸವನ್ನು ಕಳೆದುಕೊಂಡು ವರ್ಷಗಳೆ ಕಳೆದಿವೆ. ಈಗ ಆಡಳಿತಾರೂಢ ಚುನಾಯಿತ ಪ್ರತಿನಿಧಿಗಳು ಕೂಡ ವಿಮೆ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಕೃಷಿಕರ ಕೈಹಿಡಿಯಬೇಕಾದ ‘ಪ್ರಧಾನಮಂತ್ರಿ ಫಸಲ್‌ ವಿಮೆ ಯೋಜನೆ’ ಸಂಪೂರ್ಣ ಫೇಲ್‌ ಆಗಿದೆ.

ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಅತಿವೃಷ್ಟಿ, ನೆರೆ ಹಾವಳಿಯಿಂದ ವ್ಯಾಪಕ ಬೆಳೆ ನಷ್ಟವಾಗಿದ್ದು, 2019-20ನೇ ಸಾಲಿನಿಂದ ಈವರೆಗೆ ಒಟ್ಟು 53.94 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದೆ. ಇಂತಹ ಸಂಕಷ್ಟ ಕಾಲದಲ್ಲಿ ಬೆಳೆ ವಿಮೆ ಆಸರೆಯಾಗಬೇಕಿತ್ತು. ಆದರೆ, ರೈತರು ತಮ್ಮ ಬೆವರು ಸುರಿಸಿ ಕಟ್ಟಿದ ಪ್ರೀಮಿಯಂ ಕೂಡ ಕೈಗೆ ಸಿಗುತ್ತಿಲ್ಲ!

ಬ್ಯಾಂಕ್‌, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಮಂಜೂರಾತಿ ವೇಳೆ ವಿಮೆ ಕಂತನ್ನು ಕಡಿತ ಮಾಡಿಕೊಂಡೇ ರೈತರಿಗೆ ಸಾಲದ ಮೊತ್ತ ನೀಡಲಾಗುತ್ತದೆ. ಕಡ್ಡಾಯ ವ್ಯವಸ್ಥೆಯಂತಾಗಿರುವ ಈ ವಿಮೆ ಕಂತು ಬಹುತೇಕ ವಿಮಾ ಕಂಪೆನಿಗಳ ಪಾಲು ಎಂಬಂತಾಗಿದೆ. ಬೆಳೆ ಸಾಲ ಪಡೆಯುವ ರೈತರ ಹೊರತಾಗಿ, ಉಳಿದ ಬಹುತೇಕ ರೈತರು ವಿಮೆ ಯೋಜನೆ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ