Breaking News
Home / ಜಿಲ್ಲೆ / ಬೆಂಗಳೂರು / ದೆವ್ವ ಕರೆದರೆ ಹೋಗಲು ಆಗುತ್ತಾ? : ಸುಮಲತಾರಿಗೆ ರವೀಂದ್ರ ಶ್ರೀಕಂಠಯ್ಯ ತಿರುಗೇಟು

ದೆವ್ವ ಕರೆದರೆ ಹೋಗಲು ಆಗುತ್ತಾ? : ಸುಮಲತಾರಿಗೆ ರವೀಂದ್ರ ಶ್ರೀಕಂಠಯ್ಯ ತಿರುಗೇಟು

Spread the love

ಮೈಸೂರು : ”ಅವರು ಕರೆದಾಕ್ಷಣ ಹೋಗಲಾಗುವುದಿಲ್ಲ,ಉತ್ತಮರು ಕರೆದರೇ ಹೋಗಬಹುದು, ದೆವ್ವ ಕರೆದರೆ ಹೋಗಲು ಆಗುತ್ತಾ? ದೆವ್ವದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ?” ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ.

 

ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರನ್ನು ಆಣೆ ಪ್ರಮಾಣ ಮಾಡಲು ಬರುವಂತೆ ಸುಮಲತಾ ಅವರು ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಸುಮಲತಾ ಜತೆಯಲ್ಲಿರುವವರು ಭ್ರಷ್ಟಾತಿಭ್ರಷ್ಟರು.ಮೈಸೂರು ಬೆಂಗಳೂರು ಹೈವೇ ಕಾಮಗಾರಿಯಲ್ಲಿ ನೂರಾರು ಕೋಟಿ ಅಕ್ರಮ‌ ನಡೆದಿದೆ.ಆ ಅಕ್ರಮಗಳಲ್ಲಿ ಸುಮಲತಾ ಬೆಂಬಲಿಗರು ಭಾಗಿಯಾಗಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

”ಸುಮಲತಾ ಏಟ್ರಿಯಾ ಹೋಟೆಲ್ ಗೆ ಏಕೆ ಹೋಗಿದ್ದರು? ಹೋಟೆಲ್ ನಲ್ಲಿ ಕುಳಿತು ಅವರು ಏನು ಮಾಡಿದರು ಎಂಬುದರ ವಿಡಿಯೋ ದಾಖಲೆಗಳಿವೆ. ಸೂಕ್ತ ಸಂದರ್ಭದಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಸುಮಲತಾ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ.ಮುಂಬರುವ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದುಕಿಡಿ ಕಾರಿದರು.


Spread the love

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ