Breaking News

ಮೈಸೂರು ಭಾಗದ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ‌ ಪಟ್ಟಿ ಘೋಷಣೆ

Spread the love

ಮೈಸೂರು: ವಿಧಾನಸಭಾ ಚುವಾಣೆಗೆ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ. ಇತ್ತ ಕಾಂಗ್ರೆಸ್‌ ಕೂಡ ಭಾರತ್‌ ಜೋಡೋ ಯಾತ್ರೆ ಮೂಲಕ ಸಂಚಲನ ಮೂಡಿಸುತ್ತಿದೆ.

 

ಇದೀಗ ಜೆಡಿಎಸ್‌ ಪಂಚರತ್ನ ಯಾತ್ರೆಗೆ ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಕೆಲ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.ಜೆಡಿಎಸ್‌ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾಗಿದ್ದು, ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಮತ್ತೆ ತನ್ನ ಕೋಟೆ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದೆ.

ಅಲ್ಲದೇ ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್‌ ಗೌಡ ಅವರಿಗೆ ಜೆಡಿಎಸ್‌ ಟಿಕೆಟ್‌ ಘೋಷಣೆ ಮಾಡಲಾಗಿದೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ