Breaking News

ಪುನೀತ್ ನೆನಪಲ್ಲಿ ವೇದಿಕೆ ಮೇಲೆ ಒಂದಾದ ದೊಡ್ಮನೆ ಕುಟುಂಬ

Spread the love

ಮೈಸೂರು ಅರಸರ ಕುಟುಂಬದ ಬಳಿಕ ಕರ್ನಾಟಕದ ಜನ ಅತಿ ಹೆಚ್ಚು ಪ್ರೀತಿಸಿದ, ಗೌರವಿಸಿದ ಕುಟುಂಬವೆಂದರೆ ಅದು ದೊಡ್ಮನೆ ಕುಟುಂಬ.

ದೊಡ್ಮನೆ ಕುಟುಂಬದ ಬಹುತೇಕ ಸದಸ್ಯರು ಇಂದು ಪುನೀತ ಪರ್ವ ಕಾರ್ಯಕ್ರಮದಲ್ಲಿ ಒಟ್ಟಿಗೆ ವೇದಿಕೆ ಏರಿ ಅಪ್ಪುವನ್ನು ಭಾವುಕವಾಗಿ ನೆನಪು ಮಾಡಿಕೊಂಡರು.

 

ಪುನೀತ ಪರ್ವ’ ಕಾರ್ಯಕ್ರಮದಲ್ಲಿ ವಿಜಯಪ್ರಕಾಶ್ ಅವರು ಅಪ್ಪು ‘ಗೊಂಬೆ ಹೇಳುತೈತೆ’ ಹಾಡು ಹಾಡಿದರು. ಹಾಡು ಮುಗಿವ ವೇಳೆಗೆ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ದೊಡ್ಮನೆಯ ಇನ್ನೂ ಹಲವು ಸದಸ್ಯರು ಒಟ್ಟಿಗೆ ವೇದಿಕೆ ಏರಿದರು.

ದೊಡ್ಮನೆ ಕುಟುಂಬವು ವೇದಿಕೆಗೆ ಬಂದ ಕೂಡಲೇ ವೇದಿಕೆ ಮುಂದೆ ಕೂತಿದ್ದ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಸಹ ಎದ್ದು ನಿಂತು ಆ ಭಾವುಕ ಕ್ಷಣಕ್ಕೆ ಸಾಕ್ಷಿಯಾದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ