Breaking News

ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡಬೇಕೆಂದು ಕಬ್ಬು ಬೆಳೆಗಾರರು ಆರಂಭಿಸಿದ ಹೋರಾಟ ಇಂದು ಕೂಡ ಮುಂದೆವರಿದಿದೆ.

Spread the love

ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡಬೇಕೆಂದು ಕಬ್ಬು ಬೆಳೆಗಾರರು ಆರಂಭಿಸಿದ ಹೋರಾಟ ಇಂದು ಕೂಡ ಮುಂದೆವರಿದಿದೆ. ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ನಿಧನ ಮತ್ತು ಕಿತ್ತೂರು ಉತ್ಸವದ ಹಿನ್ನೆಲೆ ಸಾಂಕೇತಿಕವಾಗಿ ಇಂದು ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದರು.

 

ಭಾನುವಾರದAದು ಬೆಳಗಾವಿ ತಾಲೂಕು, ಮೂಡಲಗಿ ತಾಲೂಕು ಮತ್ತು ಗೋಕಾಕ ತಾಲೂಕಿನಿಂದ ಆಗಮಿಸಿದ ರೈತರು ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡುವಂತೆ ಒತ್ತಾಯಿಸಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜೈ ಜವಾನ್ – ಜೈ ಕಿಸಾನ್ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯ÷ಕ್ತಪಡಿಸಿದರು.

ಕಬ್ಬು ಬೆಳೆಗಾರರು ಬೆಂಬಲ ಬೆಲೆಗಾಗಿ ನಿರಂತರ ಹೋರಾಟ ಮಾಡುವ ವೇಳೆ ಅವರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಉತ್ತರ ಕರ್ನಾಟಕದ ಸವದತ್ತಿಯ ಶಾಸಕ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಹಿನ್ನೆಲೆ ರೈತರು ಸಾಂಕೇತಿಕವಾಗಿ ಹೋರಾಟ ಮಾಡುತ್ತಿದ್ದಾರೆ.

ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ದೀಪಾವಳಿಯ ವೇಳೆ ಸಿಹಿ ಉಡುಗೊರೆ ಕೊಡುವುದಾಗಿ ಹೇಳಿದ್ದರು. ಸಿಎಂ ಅವರಿಗೆ ಮನವರಿಕೆ ಮಾಡಿ ಯೋಗ್ಯ ಬೆಲೆ ಕೊಡುವುದಾಗಿ ಹೇಳಿ ಮಾತು ತಪ್ಪಿದ್ದಾರೆ. ಕಿತ್ತೂರು ಉತ್ಸವಕ್ಕೆ ಅಡ್ಡಿಯಾಗದಂತೆ ಅಲ್ಲದೇ ಆನಂದ ಮಾಮನಿ ಅವರಿಗೆ ಅಗೌರವ ತೋರದೇ ಹೋರಾಟವನ್ನು ಮುಂದುವರೆಸಿದ್ದೇವೆ. ರೈತರಿಗೆ ೫೫೦೦/- ರೂಪಾಯಿ ಬೆಲೆ ನೀಡದಿದ್ದರೇ ಉಗ್ರ ಹೋರಾಟ ಮಾಡಲಾಗುವುದು ಎಂದು ರೈತ ಹೋರಾಟಗಾರ ಶ್ರೀಶೈಲ ಅಂಗಡಿ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ