ಬಿಜೆಪಿಗೆ ಶಕ್ತಿ ತುಂಬಿದ್ದ ಉಪಸಭಾಪತಿ ಆನಂದ್ ಮಾಮನಿ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ಆನಂದ್ ಮಾಮನಿ ಅವರು ಅನಾರೋಗ್ಯ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭದಲ್ಲಿ ನಾನು ಆಸ್ಪತ್ರೆಗೆ ಹೋಗಿ ಭೇಟಿ ಮಾಡಿ ನಾನು ಹಾರೈಸಿ ಬಂದಿದ್ದೆ, ಆನಂದ್ ಮಾಮನಿ ಅವರು ಬಹಳ ಕ್ರೀಯಾಶೀಲ ವ್ಯಕ್ತಿಯಾಗಿದ್ದರು ಸವದತ್ತಿ ಕ್ಷೇತ್ರದಲ್ಲಿ ಬಿಜೆಪಿ ಶಕ್ತಿಯನ್ನು ಹೆಚ್ಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಈಗ ಅವರ ಅಗಲಿಕೆ ನೋವು ತಂದಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.