Breaking News
Home / ರಾಜಕೀಯ / ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

Spread the love

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ