Breaking News

ಮೀಸಲು ಅಧ್ಯಾದೇಶಕ್ಕೆ ಅಧಿವೇಶನದಲ್ಲಿ ಒಪ್ಪಿಗೆ: ಮುಖ್ಯಮಂತ್ರಿ

Spread the love

ಹುಬ್ಬಳ್ಳಿ: ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಅಧ್ಯಾದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಮೀಸಲಾತಿ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಇದಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಜಾರಿಗಾಗಿ ಕಾನೂನು ರಕ್ಷಣೆ ಕೊಡಲು ಎಲ್ಲ ಸಾಧ್ಯತೆಗಳನ್ನು ಮಾಡಲಾಗುವುದು. ಅಧ್ಯಾದೇಶಕ್ಕೆ ಮುಂಬರುವ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು. ಪಂಚಮಸಾಲಿ ಸಹಿತ ಎಲ್ಲ ಮೀಸಲಾತಿ ಕುರಿತು ಬೇರೆ ಬೇರೆ ಹಂತಗಳಲ್ಲಿ ಹಿಂದುಳಿದ ವರ್ಗಗಳ ಆಯೋಗದಲ್ಲಿ ಚರ್ಚೆಯಲ್ಲಿವೆ.

ಆಯಾ ಆಯೋಗದ ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು. ಮುಸ್ಲಿಂ ಸಹಿತ ಇತರ ಜಾತಿಗಳ ಮೀಸಲಾತಿ ಹಿಂಪಡೆಯುವ ಕುರಿತು ಏನೂ ಹೇಳಲಾರೆ. ಮೀಸಲಾತಿ ಕುರಿತು ಸಂವಿಧಾನದಡಿಯಲ್ಲಿ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಸರಕಾರ ನಡೆಯಲಿದೆ. ಈ ಕುರಿತು ಯಾರು ಏನೇ ಮಾತನಾಡಿದರೂ ಅದು ಅವರ ವೈಯಕ್ತಿಕ ವಿಚಾರ ಎಂದರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ