Breaking News
Home / ರಾಜಕೀಯ / ಬಸವಲಿಂಗಶ್ರೀ ವಿರುದ್ಧ ನಡೆದಿತ್ತು ಹನಿಟ್ರ್ಯಾಪ್; ಹೆಣ್ಣಿನ ಮೋಹ ಪಾಶಕ್ಕೆ ಸಿಲುಕಿದ್ರಾ ಸ್ವಾಮೀಜಿ?

ಬಸವಲಿಂಗಶ್ರೀ ವಿರುದ್ಧ ನಡೆದಿತ್ತು ಹನಿಟ್ರ್ಯಾಪ್; ಹೆಣ್ಣಿನ ಮೋಹ ಪಾಶಕ್ಕೆ ಸಿಲುಕಿದ್ರಾ ಸ್ವಾಮೀಜಿ?

Spread the love

ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು. ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು.

ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ಡೆತ್ನೋಟ್ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದಾರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೀಗ ಸ್ವಾಮೀಜಿಯವರು ಡೆತ್ ನೋಟು ಬರೆದಿಟ್ಟಿರುವುದು, ಮರ್ಯಾದೆಗೆ ಅಂಜಿ ಆತ್ಮಹತ್ಯೆ ಎಂದು ಉಲ್ಲೇಖಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ. ಸ್ವಾಮೀಜಿ ವಿರುದ್ಧ ಹನಿಟ್ರ್ಯಾಪ್​​​ ನಡೆದಿದ್ದು, ಡೆತ್​​ನೋಟ್​ನಲ್ಲಿ ಸಂಚಿನ ಬಗ್ಗೆ ಕುಂಚಗಲ್​​​​ ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿ ಬರೆದಿದ್ದಾರೆ. ಕುಂಚಗಲ್​​​​ ಸ್ವಾಮೀಜಿ ಕೆಳಗಿಳಿಸಲು ನಡೆದಿತ್ತು ಮಾಸ್ಟರ್ ಪ್ಲಾನ್, ಮಾಸ್ಟರ್ ಪ್ಲಾನ್ ಹಿಂದೆ ಇರೋ ವ್ಯಕ್ತಿ ಮತ್ತೋರ್ವ ಸ್ವಾಮೀಜಿ.

ಮತ್ತೊಂದು ಮಠದ ಸ್ವಾಮೀಜಿ ತಂತ್ರಕ್ಕೆ ಬಲಿಯಾದೇ ಎಂದು ಡೆತ್​​​ನೋಟ್​ ನಲ್ಲಿ ಉಲ್ಲೇಖಿಸಲಾಗಿದೆಯಂತೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ