ಬೆಂಗಳೂರು: ಇಡೀ ಕರುನಾಡೇ ಕಾಯುತ್ತಿರೋ ಅಪ್ಪು ಕನಸಿನ ಕೊನೆಯ ಚಿತ್ರ ಗಂಧದಗುಡಿ (Gandhadagudi) ನಾಳೆ ತೆರೆಗೆ ಬರುತ್ತಿದೆ. ಇದರಲ್ಲಿ ಪುನೀತ್ ಅಭಿನಯಿಸಿದ್ದಾರೆ ಅನ್ನೋದಕ್ಕಿಂತ ಅಪ್ಪು ಅಪ್ಪುವಾಗಿಯೇ ಇದ್ರು ಅನ್ನೋದು ಸತ್ಯ.
ಗಂಧದಗುಡಿ, ಪುನೀತ ಪರ್ವ (Puneetha Parva) ಕಾರ್ಯಕ್ರಮದ ಬಗ್ಗೆ ಇದೀಗ ಅಶ್ವಿನಿ ಪುನೀತ್ ರಾಜ್ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ರಾಮ್ (Santhosh Ananddram) ಸಂದರ್ಶನದಲ್ಲಿ ಅಶ್ವಿನಿ ಮಾತನಾಡಿದ್ದು, ಶೂಟಿಂಗ್ ಸಂದರ್ಭದ ಕೆಲ ಘಟನೆಗಳನ್ನ ಹಂಚಿಕೊಂಡಿದ್ದಾರೆ
ಪುನೀತ್ ಪರ್ವ ಮಾಡಿದ್ದೇ ಅಭಿಮಾನಿಗಳು. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಬಂದಿದ್ದರು. ನನಗೆ ತುಂಬಾ ಸಂತೋಷ ಆಯ್ತು, ತೃಪ್ತಿನೂ ಕೊಟ್ಟಿತ್ತು. ಅಭಿಮಾನಿಗಳಿಗೆ ನಮ್ಮ ಕುಟುಂಬ ಚಿರಋಣಿಯಾಗಿರುತ್ತೇವೆ. ಕಳೆದ ಒಂದು ವರ್ಷದಿಂದ ಸರ್ಕಾರ ನಮ್ಮ ಜೊತೆ ಇದೆ. ಎಲ್ಲರ ಬೆಂಬಲದಿಂದ ಕಾರ್ಯಕ್ರಮ ಚೆನ್ನಾಗಿ ಆಯ್ತು ಎಂದು ಅಶ್ವಿನಿ (Ashwini Puneeth Raj kumar) ಹೇಳಿದ್ದಾರೆ.
ಗಂಧದಗುಡಿ ಅಪ್ಪಾಜಿ, ಶಿವಣ್ಣ (Shivaraj Kumar) ಮಾಡಿದ್ದು, ಅದರಲ್ಲಿ ಕಥೆ ಇತ್ತು, ಆದರೇ ಈ ಚಿತ್ರದಲ್ಲಿ ಜರ್ನಿನೇ ಸಿನಿಮಾ. ಚಿತ್ರದಲ್ಲಿ ಅವರು ಅವರಾಗೆ ಇದ್ದರು. ನನಗೆ ತುಂಬ ಹೆಮ್ಮೆ ಅನ್ನಿಸುತ್ತೆ. ನನ್ನ ಜೊತೆ ಟ್ರಕ್ಕಿಂಗ್ ಮಾಡಬೇಕೆಂದು ಅಪ್ಪು ಕಾಲ್ ಮಾಡಿದ್ರು. ನಾನು ಅವರ ತಂಡದ ಜೊತೆ ಟ್ರಕ್ಕಿಂಗ್ ಮಾಡಿದ್ದೆ. ಬಳಿಕ ಒಂದು ಸಣ್ಣ ಹಳ್ಳಿಯಲ್ಲಿ ಊಟ ಮಾಡಿಕೊಂಡು ಬಂದೆವು ಎಂದು ಗಂಧದಗುಡಿ ಚಿತ್ರದ ಚಿತ್ರೀಕರಣ ನೆನಪು ಮೆಲುಕು ಹಾಕಿಕೊಂಡಿದ್ದಾರೆ.