ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆಯಾಗಿದೆ.
ಹೌದು ಮಂಗಳವಾರ ಸಾಯಂಕಾಲ ಮೂವರು ಸ್ನೇಹಿತರು ದೀಪಾವಳಿ ಹಬ್ಬದ ಮೋಜು ಮಸ್ತಿ ಮಾಡುತ್ತಾ, ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ನೀರಿಗೆ ಇಳಿದಿದ್ದರು. ಇದರಲ್ಲಿ ಅನಗೋಳದ 22 ವರ್ಷದ ಸತೀಶ ಹನಮನ್ನವರ ಎಂಬ ಯುವಕ ನೀರಿನಲ್ಲಿ ಮುಳುಗಿದ್ದ. ಈತನ ಸ್ನೇಹಿತರು ಅಕ್ಕ ಪಕ್ಕದವರಿಗೆ ವಿಷಯ ತಿಳಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಪಿಎಂಸಿ ಠಾಣೆ ಪೆÇಲೀಸರು ದೌಡಾಯಿಸಿದ್ದರು.
ಅಲ್ಲದೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಎಸ್ಡಿಆರ್ಎಫ್ ಸಿಬ್ಬಂದಿಗಳು ಕಳೆದ ಎರಡು ದಿನಗಳಿಂದ ಬೋಟ್ ಸೇರಿ ಇನ್ನಿತರ ಸಾಧನಗಳ ಮೂಲಕ ಶೋಧ ಕಾರ್ಯ ನಡೆಸಿದ್ದರು.
ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಯುವಕನ ಶವ ಪತ್ತೆಯಾಗಿದ್ದು. ಶವವನ್ನು ಹೊರಗೆ ತೆಗೆಯಲಾಗಿದೆ. ಯುವಕನ ಶವ ನೀರಿನಲ್ಲಿ ಬಹಳ ಕೆಳಗೆ ಹೋಗಿದ್ದರಿಂದ ಶವ ಹೊರಗೆ ತೆಗೆಯಲು ವಿಳಂಬವಾಗಿದೆ ಎನ್ನಲಾಗುತ್ತಿದೆ. ಇನ್ನು ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಎಪಿಎಂಸಿ ಪೆÇಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ರೀತಿ ಕಲ್ಲಿನ ಕ್ವಾರಿಗಳಲ್ಲಿ ಪದೇ ಪದೇ ಇಂತಹ ಘಟನೆಗಳು ಸಂಭವಿಸುತ್ತಿವೆ. ಹೀಗಾಗಿ ಇಲ್ಲಿ ಈಜಲು ನಿರ್ಬಂಧ ವಿಧಿಸಬೇಕು. ಅಲ್ಲಿ ಎಚ್ಚರಿಕೆ ಫಲಕವನ್ನು ಅಳವಡಿಸುವ ಕೆಲಸ ಮಾಡಬೇಕಿದೆ.