Breaking News

ಆಹ್ವಾನ ಪತ್ರಿಕೆಯಲ್ಲಿ ದಿವಂಗತ ಶಾಸಕ ಆನಂದ ಮಾಮನಿ ಹೆಸರು ಶಿಕ್ಷಣ ಇಲಾಖೆಯ ಯಡವಟ್ಟು..!

Spread the love

ದಿವಗಂತ ಶಾಸಕ ಆನಂದ ಮಾಮನಿ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕಿ ಅದ್ವಾನವಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಪ್ರೌಢ ಶಾಲೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಇದರ ಆಹ್ವಾನ ಪತ್ರಿಕೆಯಲ್ಲಿ ದಿವಂಗತ ಶಾಸಕ ಆನಂದ ಮಾಮನಿ ಹೆಸರನ್ನು ಹಾಕಿದ್ದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದೇ ತಿಂಗಳ ಅಕ್ಟೋಬರ್ 23ರಂದು ಸವದತ್ತಿ ಶಾಸಕರು ಹಾಗೂ ವಿಧಾನಸಭೆಉ ಉಪಸಭಾಧ್ಯಕ್ಷರು ಆಗಿದ್ದ ಆನಂದ ಮಾಮನಿ ನಿಧನ ಹೊಂದಿದ್ದರು. ನಾಳೆ ಶುಕ್ರವಾರ ನಡೆಯಲಿರುವ ಕ್ರೀಡಾಕೂಟ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಆನಂದ ಮಾಮನಿ ಹೆಸರು ಹಾಕಲಾಗಿದೆ. ತೀರಿ ಹೋದ ಶಾಸಕರ ಹೆಸರು ಪ್ರಿಂಟ್ ಮಾಡಿ ಅಧಿಕಾರಿಗಳು ಅದ್ವಾನ ಮಾಡಿಕೊಂಡಿದ್ದಾರೆ. ನಾಳೆ ಚಿಕ್ಕೋಡಿಯಲ್ಲಿ ಆಯೋಜನೆಗೊಂಡಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟ. ದಿವಂಗತರ ಹೆಸರು ಹಾಕಿ ಯಡವಟ್ಟು ಮಾಡಿಕೊಂಡಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ