ಮನೆಯಲ್ಲಿನ ಅಡುಗೆ ಅನಿಲ ಸೋರಿಕೆಯಾಗಿರುವ ಪರಿಣಾಮ ಬೆಂಕಿ ಹತ್ತಿದ್ದು, ದೊಡ್ಡ ಪ್ರಮಾಣದಲ್ಲಿನ ಗೃಹಬಳಕೆಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ನಡೆದಿದೆ.
ದೀಪಾವಳಿ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಲೀಕ್ ಆಗಿದ್ದು, ಸೋರಿಕೆಯಾದ ಸಿಲಿಂಡರ್ ಏರ್ ಪಾಸ್ ಆಗಲು ಯಾವುದೇ ಸ್ಥಳಾವಕಾಶ ಇಲ್ಲದೇ ಇರುವುದರಿಂದ ಆಕಸ್ಮಿಕ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಮನೆಯಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ.
Laxmi News 24×7