ಬೆಂಗಳೂರು: ‘2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ಪಕ್ಷದ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಅವರು ಮಾತನಾಡಿ, ‘ಕೆಲವರು ಜೆಡಿಎಸ್ಗೆ 20 ರಿಂದ 25 ಸೀಟುಗಳು ಬರುತ್ತವೆ ಎಂದು ಹೇಳುತ್ತಿದ್ದಾರೆ.
ಅದನ್ನೆಲ್ಲ ನಂಬಬೇಡಿ. ನನ್ನ ಜೊತೆ ನೀವು ಕೈ ಜೋಡಿಸಿ, ಜನರ ಮುಂದೆ ನಮ್ಮ ಯೋಜನೆಗಳ ಬಗ್ಗೆ ತಿಳಿಸಿ’ ಎಂದರು.
‘ನೀವು ಎಷ್ಟು ಜನರ ಮುಂದೆ ಹೋದರೆ ನಮ್ಮ ಪಕ್ಷಕ್ಕೆ ಒಳ್ಳೆಯ ಫಲಿತಾಂಶ ಬರುತ್ತದೆ. ರಾಜ್ಯದಲ್ಲಿ ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಈ ಬಗ್ಗೆ ಯಾರಿಗೂ ಸಂಶಯ
ಬೇಡ’ ಎಂದರು.
‘ಜೆಡಿಎಸ್ಗೆ ಲಕ್ಷಾಂತರ ಕಾರ್ಯ ಕರ್ತರು ಇದ್ದು, ಅವರೇ ಬೆನ್ನೆಲುಬಾ ಗಿದ್ದಾರೆ. ಕಾಂಗ್ರೆಸ್- ಬಿಜೆಪಿ ಬಗ್ಗೆ ಚರ್ಚೆ ಮಾಡುವುದು ಬೇಡ. ನಮ್ಮ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡಬೇಕು. ಎಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ರಥ ಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಜನತಾ ಜಲಧಾರೆ ಮಾಡಿದ್ದರು. ಇವೆಲ್ಲವೂ ಜನರ ಅಭಿವೃದ್ಧಿ ಕಾರ್ಯಕ್ರಮಗಳು’ ಎಂದು ಹೇಳಿದರು.
ಮೀಸಲಾತಿ ಚರ್ಚೆಗೆ ಸಿದ್ಧ: ಎಚ್.ಡಿ.ಕುಮಾರಸ್ವಾಮಿ ಸವಾಲು
‘ಮೀಸಲಾತಿ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಎಸ್.ಟಿ ಸಮುದಾಯಕ್ಕೆ ಎಚ್.ಡಿ.ದೇವೇಗೌಡರು ಕೊಟ್ಟಿರುವ ಮೀಸಲಾತಿ ಕುರಿತು ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆಗೆ ಸಿದ್ಧನಿದ್ದೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.